10:13 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು