11:01 AM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು