9:22 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು