3:34 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಾಣಿ ಸಮೀಪ ನಡುರಸ್ತೆಯಲ್ಲೇ ಯುವತಿಯ ಅಮಾನುಷ ಕೊಲೆ: ಆಟೋದಲ್ಲಿ ಬಂದ ತಂಡದ ಕೃತ್ಯ; ಆರೋಪಿಗಳ ಬಂಧನ

27/06/2022, 22:40

ಮಂಗಳೂರು(reporterkarnataka.com): ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳ ಮೇಲೆ ಆಟೋದಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ 
ಇರಿದು ಕೊಲೆ ಮಾಡಿದ ಅಮಾನುಷ ಘಟನೆ ಮಾಣಿಯ ನೇರಳಕಟ್ಟೆ ಎಂಬಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಲಾ(35) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧಗಳಿಂದ ದಾಳಿ ನಡೆಸಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದುರಾದರೂ ಅಷ್ಟರೊಳಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ. ಮೃತ ಮಹಿಳೆ ಪುತ್ತೂರಿನಲ್ಲಿ ಹೊಟೇಲ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು