4:45 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು