10:21 AM Sunday12 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ

28/06/2022, 23:43

ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರಕಾರಕ್ಕೆ ಯಾಕೆ ತಾತ್ಸಾರ ಭಾವನೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ನ್ಯಾಯವಾದಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ.ಆದರೆ ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗೂ ಪಕ್ಷದ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ  ಬಿಲ್ಲವ, ಈಡಿಗ ಹಾಗೂ ಸಮಸ್ತ ನಾರಾಯಣಗುರುಗಳ ಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ಪ್ರತಿಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ‌ಆಗುತ್ತಿರುವ ಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರ ಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪದ್ಮರಾಜ್ ಆರ್. ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು