2:55 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ

28/06/2022, 23:43

ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರಕಾರಕ್ಕೆ ಯಾಕೆ ತಾತ್ಸಾರ ಭಾವನೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ನ್ಯಾಯವಾದಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ.ಆದರೆ ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗೂ ಪಕ್ಷದ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ  ಬಿಲ್ಲವ, ಈಡಿಗ ಹಾಗೂ ಸಮಸ್ತ ನಾರಾಯಣಗುರುಗಳ ಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ಪ್ರತಿಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ‌ಆಗುತ್ತಿರುವ ಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರ ಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪದ್ಮರಾಜ್ ಆರ್. ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು