7:51 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

40% ಕಮಿಷನ್ ಆರೋಪ: ಪ್ರಧಾನಿ ಕಾರ್ಯಾಲಯದಿಂದ ಕರೆ?; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ; ಭ್ರಷ್ಟರಲ್ಲಿ ಎಲ್ಲಿಲ್ಲದ ನಡುಕ.!

29/06/2022, 20:23

ಬೆಂಗಳೂರು(reporterkarnataka.com): ಪ್ರಧಾನಿ ಕಾರ್ಯಾಲಯದಿಂದ(ಪಿಎಂಒ)ಬಂದಿದೆ ಎನ್ನಲಾದ ಕರೆಯೊಂದು ದೂರದ ಬೆಂಗಳೂರಿನಲ್ಲಿ ಭಾರೀ ಕಂಪನ ಉಂಟು ಮಾಡಿದೆ. 40% ಕಮಿಷನ್ ಕುರಿತು ಗುತ್ತಿಗೆದಾರರು ಮಾಡಿರುವ ಆರೋಪದ ಬಗ್ಗೆ ಇದೀಗ  ಪ್ರಧಾನಿ ಕಾರ್ಯಾಲಯ ಕಾರ್ಯೋನ್ಮುಖವಾಗಿದೆ. ಈ ನಡುವೆ ಭ್ರಷ್ಟರಲ್ಲಿ ನಡುಕ ಉಂಟು ಮಾಡಿದೆ.

40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗಲೇ ಈ ಕರೆ ಆಡಳಿತ ಪಕ್ಷದ ಬಿಜೆಪಿಯಲ್ಲಿ ಭಾರೀ ತಲ್ಲಣವನ್ನುಂಟು ಮಾಡಿದೆ. ಭ್ರಷ್ಟ ಸಚಿವರು, ಶಾಸಕರುಗಳಿಗೆ ನಿದ್ದೆ ಇಲ್ಲದ ರಾತ್ರಿಯನ್ನು ಇದು ತರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ರಾಜಕೀಯ ವೀಕ್ಷಕರು ಲೆಕ್ಕ ಹಾಕುತ್ತಾರೆ.

ಗುತ್ತಿಗೆದಾರರ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ 

ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಕರೆ ಬಂದಿದೆ ಎಂಬ ಮಾಹಿತಿ ಇದೆ. ದೂರುದಾರರ ಮಾಹಿತಿ ನೀಡುವಂತೆ ಪಿಎಂಒದಿಂದ ಕೋರಲಾಗಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ಕಾರ್ಯಾಲಯದಿಂದ ಬಂದ ಕರೆಯಲ್ಲಿ

“ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ” ಸೂಚಿಸಲಾಯಿತು ಎನ್ನಲಾಗಿದೆ.

ವಿಶೇಷವೆಂದರೆ ಮೋದಿ ಬೆಂಗಳೂರಿಗೆ ಬರುವ ಮುನ್ನ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿತ್ತು. ಈ ಬಗ್ಗೆನೂ ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತನಿಖೆಗೆ ಗೃಹ ಇಲಾಖೆಯ ತಂಡ ಬೆಂಗಳೂರಿಗೆ ಬರೋ ಸಾಧ್ಯತೆ ಇದೆ. ಗುತ್ತಿಗೆದಾರರ‌ ಸಂಘವೂ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಆರೋಪ ಮಾಡಿತ್ತು. ದಾಖಲೆಯನ್ನು ಸಿದ್ದಪಡಿಸಿಕೊಳ್ಳಲು ಪ್ರಧಾನಿ ಕಾರ್ಯಾಲಯ ಸೂಚಿಸಿದೆ ಎಂದು ಹೇಳಲಾಗಿದ್ದು, ಕೆಂಪಣ್ಣ ಅವರು ಪ್ರಧಾನಿ ಕಚೇರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂ ಒದಿಂದ ಬಂದಿದೆ ಎನ್ನಲಾದ  ಕರೆ ಕುರಿತು 

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನನಗೆ ಪ್ರಧಾನಿಯವರ ಕಚೇರಿಯಿಂದ ಕರೆ ಬಂದಿಲ್ಲ. ಯಾವುದೇ ನೊಟೀಸ್ ಕೂಡ ಬಂದಿಲ್ಲ. ನಾನು ಕೆಲಸದ ಮೇಲೆ ಮೈಸೂರಿಗೆ ಬಂದಿದ್ದೆ.

ಯಾರೋ ನಿಮ್ಮನ್ನ ಕೇಳಿಕೊಂಡು ಬಂದಿದ್ದಾರೆ. ನಿಮ್ಮ‌ಜೊತೆ ಮಾತನಾಡಬೇಕೆಂದು ಕೇಳ್ತಿದ್ದಾರೆ ಎಂದು ಕಚೇರಿ ಸಿಬ್ಬಂದಿ ತಿಳಿಸಿದರು. ನಾನು‌ ಅವರನ್ನ ಯಾರೆಂದು ವಿಚಾರಿಸಿದೆ.

ಹೋಂ ಡಿಪಾರ್ಟಮೆಂಟ್ ನಿಂದ ಬಂದಿದ್ದೇವೆ ಎಂದು ಹೇಳಿದರು. ನಿಮ್ಮನ್ನ ಭೇಟಿಯಾಗಬೇಕು ಅಂತ ಹೇಳಿದ್ರು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಈ ಹಿಂದೆ ರಾಜ್ಯ ಸರಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು