6:52 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಸುಳ್ಯ: 4 ವರ್ಷದ ಮಗು ಜತೆ ಬಾವಿಗೆ ಹಾರಿದ ಗೃಹಿಣಿ; ತಾಯಿ ಸಾವು, ಅದೃಷ್ಟವಶಾತ್ ಕೂಸು ಬಚಾವ್

29/06/2022, 23:11

ಸುಳ್ಯ(reporterkarnataka.com): ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ತಾಯಿಯೊಬ್ಬರು ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿದ್ದು, ಅದೃಷ್ಟವಶಾತ್ ಮಗು ಬದುಕುಳಿದ ಘಟನೆ ನಡೆದಿದೆ.

ಸುಳ್ಯದ ಕಾಲೇಜೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ (34) ಎಂಬವರು ಬುಧವಾರ ಮುಂಜಾನೆ ತನ್ನ 4 ವರ್ಷದ ಮಗಳು ಪೂರ್ವಿಕಾಳೊಂದಿಗೆ ಬಾವಿಗೆ ಹಾರಿದ್ದರೆನ್ನಲಾಗಿದೆ.

ಮುಂಜಾನೆ ಗೀತಾ ಅವರು ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿ ಮನೆಯವರು ಹುಡುಕಾಡಿದಾಗ ಗೀತಾ ಮತ್ತು ಮಗು ಬಾವಿಯಲ್ಲಿ ಬಿದ್ದಿರುವುದು ಕಂಡುಬಂತು. ಮಗು ಪೂರ್ವಿಕಾ ಬಾವಿಯೊಳಗೆ ಇದ್ದ ಕಲ್ಲನ್ನು ಹಿಡಿದುಕೊಂಡು ಬದುಕುಳಿದಿದ್ದು, ತಕ್ಷಣ ಆಕೆಯನ್ನು ಮೇಲಕ್ಕೆತ್ತಿ ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

ಅದಾಗಲೇ ಗೀತಾ ನೀರಲ್ಲಿ ಮುಳುಗಿ ಅಸು ನೀಗಿದ್ದರೆನ್ನಲಾಗಿದೆ. ತೀವ್ರ ಆಘಾತಕ್ಕೊಳಗಾಗಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಮೃತ ಗೀತಾ ಅವರು ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು