6:52 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಎನ್ ಡಿ. ಎ ಅಭ್ಯರ್ಥಿ  ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್ ಡಿಕೆ ಇಂಗಿತ

30/06/2022, 12:40

ಬೆಂಗಳೂರು(reporterkarnataka.com): ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಹೇಳಿದರು.

ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ.‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.

ಇನ್ನು ಇಲ್ಲಿ ಕಾಂಗ್ರೆಸ್, ಬಿಜೆಪಿ ಅನ್ನುವ ಪ್ರಶ್ನೆ ಅಲ್ಲ. ಬಿ ಟೀಂ ಅನ್ನುವ ಪ್ರಶ್ನೆಯೂ ರಾಷ್ಟ್ರಪತಿ ಚುನಾವಣೆಯಲ್ಲಿ ಬರಲ್ಲ. ನಾವು ತೆಗೆದುಕೊಂಡ ನಿರ್ಧಾರ ಬಿಜೆಪಿ ಬಿ ಟೀಂ ಅಂತ ಪ್ರಚಾರ ಮಾಡೋದು ಇದಕ್ಕೆ ಅನ್ವಯ ಆಗಲ್ಲ ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ಚಾಟಿ ಬೀಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು