9:30 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ !

19/06/2021, 21:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . 


ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ. ಬೇಡಿಕೆಗೆ ಅನುಗುಣವಾಗಿ ರೈತರ ರೈಲನ್ನು ಓಡಿಸಲಾಗುವುದು . ರೈತರು ತಮ್ಮ ಉತ್ಪನ್ನಗಳಿಗೆ ಹೊರ ರಾಜ್ಯಗಳಿಂದ ಬೇಡಿಕೆ ಪಡೆದುಕೊಂಡು ಶೇ .೫೦ ರ ರಿಯಾಯಿತಿ ದರದಲ್ಲಿ ಸಾಗಾಣಿಕೆ ಮಾಡಬಹುದಾಗಿದೆ ಎಂದು ಹೇಳಿದರು . 

ರಸ್ತೆ ಮೂಲಕ ದೆಹಲಿಗೆ ಮಾವು ಮತ್ತಿತರ ಉತ್ಪನ್ನಗಳನ್ನು ಸಾಗಿಸಲು ಕೆಜಿಯೊಂದಕ್ಕೆ ರೂ .೭.೮೦ ಖರ್ಚು ಬರುತ್ತದೆ . ರೈಲಿನ ಮೂಲಕ ರೂ .೨.೮೨ ಖರ್ಚು ತಗಲುತ್ತದೆ . ಮಾವಿನ ಹಣ್ಣನ್ನು ಮಾತ್ರವಲ್ಲದೆ , ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಹೆಚ್ಚಾಗಿ ಬೆಳೆಯುವ ಟೊಮೇಟೊ ಮತ್ತಿತರ ತರಕಾರಿಗಳನ್ನೂ ಸಹ ದೇಶದ ವಿವಿಧ ನಗರಗಳಿಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು . 

ಬಂಗಾರಪೇಟೆ , ಕೋಲಾರ , ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ಸೇರುವ ರೈಲು ಮಾರ್ಗವನ್ನು ವಿದ್ಯುತೀಕರಣ ಗೊಳಿಸಲಾಗುವುದು . ಈ ಕಾರ್ಯಕ್ಕೆ  ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಿದರು.


 ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ , ಕಿಸಾನ್ ರೈಲು ಸಂಕಷ್ಟದಲ್ಲಿರುವ ರೈತರಿಗೆ ವರದಾನವಾಗಲಿದೆ . ಮೊದಲ ಬಾರಿಗೆ ಇಲ್ಲಿಂದ ದೆಹಲಿಯ ಆದರ್ಶ ನಗರಕ್ಕೆ ೨೫೦ ಟನ್ ಮಾವಿನ ಹಣ್ಣನ್ನು ಕಳಿಸಲಾಗುತ್ತಿದೆ . ರೈತರ ಹಿತದೃಷ್ಟಿಯಿಂದ ಈ ಪ್ರಕ್ರಿಯೆ ಮುಂದುವರಿಯಲಿದ್ದು , ಹೆಚ್ಚಿನ ಅನುಕೂಲವಾಗುವುದು .ರೈತರು ನೇರವಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಸೇವೆ ಪಡೆದುಕೊಳ್ಳಬೇಕು ಎಂದು ನುಡಿದರು . ರೈಲ್ವೆ ಉಪ ವ್ಯವಸ್ಥಾಪಕ ಅಶೋಕ್ ಕುಮಾರ್ ಶರ್ಮ , ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್. ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ರೆಡ್ಡಿ , ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ , ಮಾಜಿ ಅಧ್ಯಕ್ಷ ಬಂಡಪಲ್ಲಿ ಚಂದ್ರಾರೆಡ್ಡಿ , ಮುಖಂಡರಾದ ಎಂ.ಲಕ್ಷ್ಮಣಗೌಡ , ನಾರಾಯಣಸ್ವಾಮಿ , ಪುರಸಭಾ ಸದಸ್ಯರಾದ ನಾಗರಾಜ್ , ಪತಿವ್ವಲ್ಲಾ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು