9:06 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ !

19/06/2021, 21:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . 


ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ. ಬೇಡಿಕೆಗೆ ಅನುಗುಣವಾಗಿ ರೈತರ ರೈಲನ್ನು ಓಡಿಸಲಾಗುವುದು . ರೈತರು ತಮ್ಮ ಉತ್ಪನ್ನಗಳಿಗೆ ಹೊರ ರಾಜ್ಯಗಳಿಂದ ಬೇಡಿಕೆ ಪಡೆದುಕೊಂಡು ಶೇ .೫೦ ರ ರಿಯಾಯಿತಿ ದರದಲ್ಲಿ ಸಾಗಾಣಿಕೆ ಮಾಡಬಹುದಾಗಿದೆ ಎಂದು ಹೇಳಿದರು . 

ರಸ್ತೆ ಮೂಲಕ ದೆಹಲಿಗೆ ಮಾವು ಮತ್ತಿತರ ಉತ್ಪನ್ನಗಳನ್ನು ಸಾಗಿಸಲು ಕೆಜಿಯೊಂದಕ್ಕೆ ರೂ .೭.೮೦ ಖರ್ಚು ಬರುತ್ತದೆ . ರೈಲಿನ ಮೂಲಕ ರೂ .೨.೮೨ ಖರ್ಚು ತಗಲುತ್ತದೆ . ಮಾವಿನ ಹಣ್ಣನ್ನು ಮಾತ್ರವಲ್ಲದೆ , ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಹೆಚ್ಚಾಗಿ ಬೆಳೆಯುವ ಟೊಮೇಟೊ ಮತ್ತಿತರ ತರಕಾರಿಗಳನ್ನೂ ಸಹ ದೇಶದ ವಿವಿಧ ನಗರಗಳಿಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು . 

ಬಂಗಾರಪೇಟೆ , ಕೋಲಾರ , ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ಸೇರುವ ರೈಲು ಮಾರ್ಗವನ್ನು ವಿದ್ಯುತೀಕರಣ ಗೊಳಿಸಲಾಗುವುದು . ಈ ಕಾರ್ಯಕ್ಕೆ  ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಿದರು.


 ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ , ಕಿಸಾನ್ ರೈಲು ಸಂಕಷ್ಟದಲ್ಲಿರುವ ರೈತರಿಗೆ ವರದಾನವಾಗಲಿದೆ . ಮೊದಲ ಬಾರಿಗೆ ಇಲ್ಲಿಂದ ದೆಹಲಿಯ ಆದರ್ಶ ನಗರಕ್ಕೆ ೨೫೦ ಟನ್ ಮಾವಿನ ಹಣ್ಣನ್ನು ಕಳಿಸಲಾಗುತ್ತಿದೆ . ರೈತರ ಹಿತದೃಷ್ಟಿಯಿಂದ ಈ ಪ್ರಕ್ರಿಯೆ ಮುಂದುವರಿಯಲಿದ್ದು , ಹೆಚ್ಚಿನ ಅನುಕೂಲವಾಗುವುದು .ರೈತರು ನೇರವಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಸೇವೆ ಪಡೆದುಕೊಳ್ಳಬೇಕು ಎಂದು ನುಡಿದರು . ರೈಲ್ವೆ ಉಪ ವ್ಯವಸ್ಥಾಪಕ ಅಶೋಕ್ ಕುಮಾರ್ ಶರ್ಮ , ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್. ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ರೆಡ್ಡಿ , ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ , ಮಾಜಿ ಅಧ್ಯಕ್ಷ ಬಂಡಪಲ್ಲಿ ಚಂದ್ರಾರೆಡ್ಡಿ , ಮುಖಂಡರಾದ ಎಂ.ಲಕ್ಷ್ಮಣಗೌಡ , ನಾರಾಯಣಸ್ವಾಮಿ , ಪುರಸಭಾ ಸದಸ್ಯರಾದ ನಾಗರಾಜ್ , ಪತಿವ್ವಲ್ಲಾ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು