10:53 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ !

19/06/2021, 21:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . 


ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ. ಬೇಡಿಕೆಗೆ ಅನುಗುಣವಾಗಿ ರೈತರ ರೈಲನ್ನು ಓಡಿಸಲಾಗುವುದು . ರೈತರು ತಮ್ಮ ಉತ್ಪನ್ನಗಳಿಗೆ ಹೊರ ರಾಜ್ಯಗಳಿಂದ ಬೇಡಿಕೆ ಪಡೆದುಕೊಂಡು ಶೇ .೫೦ ರ ರಿಯಾಯಿತಿ ದರದಲ್ಲಿ ಸಾಗಾಣಿಕೆ ಮಾಡಬಹುದಾಗಿದೆ ಎಂದು ಹೇಳಿದರು . 

ರಸ್ತೆ ಮೂಲಕ ದೆಹಲಿಗೆ ಮಾವು ಮತ್ತಿತರ ಉತ್ಪನ್ನಗಳನ್ನು ಸಾಗಿಸಲು ಕೆಜಿಯೊಂದಕ್ಕೆ ರೂ .೭.೮೦ ಖರ್ಚು ಬರುತ್ತದೆ . ರೈಲಿನ ಮೂಲಕ ರೂ .೨.೮೨ ಖರ್ಚು ತಗಲುತ್ತದೆ . ಮಾವಿನ ಹಣ್ಣನ್ನು ಮಾತ್ರವಲ್ಲದೆ , ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಹೆಚ್ಚಾಗಿ ಬೆಳೆಯುವ ಟೊಮೇಟೊ ಮತ್ತಿತರ ತರಕಾರಿಗಳನ್ನೂ ಸಹ ದೇಶದ ವಿವಿಧ ನಗರಗಳಿಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು . 

ಬಂಗಾರಪೇಟೆ , ಕೋಲಾರ , ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ಸೇರುವ ರೈಲು ಮಾರ್ಗವನ್ನು ವಿದ್ಯುತೀಕರಣ ಗೊಳಿಸಲಾಗುವುದು . ಈ ಕಾರ್ಯಕ್ಕೆ  ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಿದರು.


 ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ , ಕಿಸಾನ್ ರೈಲು ಸಂಕಷ್ಟದಲ್ಲಿರುವ ರೈತರಿಗೆ ವರದಾನವಾಗಲಿದೆ . ಮೊದಲ ಬಾರಿಗೆ ಇಲ್ಲಿಂದ ದೆಹಲಿಯ ಆದರ್ಶ ನಗರಕ್ಕೆ ೨೫೦ ಟನ್ ಮಾವಿನ ಹಣ್ಣನ್ನು ಕಳಿಸಲಾಗುತ್ತಿದೆ . ರೈತರ ಹಿತದೃಷ್ಟಿಯಿಂದ ಈ ಪ್ರಕ್ರಿಯೆ ಮುಂದುವರಿಯಲಿದ್ದು , ಹೆಚ್ಚಿನ ಅನುಕೂಲವಾಗುವುದು .ರೈತರು ನೇರವಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಸೇವೆ ಪಡೆದುಕೊಳ್ಳಬೇಕು ಎಂದು ನುಡಿದರು . ರೈಲ್ವೆ ಉಪ ವ್ಯವಸ್ಥಾಪಕ ಅಶೋಕ್ ಕುಮಾರ್ ಶರ್ಮ , ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್. ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ರೆಡ್ಡಿ , ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ , ಮಾಜಿ ಅಧ್ಯಕ್ಷ ಬಂಡಪಲ್ಲಿ ಚಂದ್ರಾರೆಡ್ಡಿ , ಮುಖಂಡರಾದ ಎಂ.ಲಕ್ಷ್ಮಣಗೌಡ , ನಾರಾಯಣಸ್ವಾಮಿ , ಪುರಸಭಾ ಸದಸ್ಯರಾದ ನಾಗರಾಜ್ , ಪತಿವ್ವಲ್ಲಾ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು