11:13 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ !

19/06/2021, 21:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . 


ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ. ಬೇಡಿಕೆಗೆ ಅನುಗುಣವಾಗಿ ರೈತರ ರೈಲನ್ನು ಓಡಿಸಲಾಗುವುದು . ರೈತರು ತಮ್ಮ ಉತ್ಪನ್ನಗಳಿಗೆ ಹೊರ ರಾಜ್ಯಗಳಿಂದ ಬೇಡಿಕೆ ಪಡೆದುಕೊಂಡು ಶೇ .೫೦ ರ ರಿಯಾಯಿತಿ ದರದಲ್ಲಿ ಸಾಗಾಣಿಕೆ ಮಾಡಬಹುದಾಗಿದೆ ಎಂದು ಹೇಳಿದರು . 

ರಸ್ತೆ ಮೂಲಕ ದೆಹಲಿಗೆ ಮಾವು ಮತ್ತಿತರ ಉತ್ಪನ್ನಗಳನ್ನು ಸಾಗಿಸಲು ಕೆಜಿಯೊಂದಕ್ಕೆ ರೂ .೭.೮೦ ಖರ್ಚು ಬರುತ್ತದೆ . ರೈಲಿನ ಮೂಲಕ ರೂ .೨.೮೨ ಖರ್ಚು ತಗಲುತ್ತದೆ . ಮಾವಿನ ಹಣ್ಣನ್ನು ಮಾತ್ರವಲ್ಲದೆ , ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಹೆಚ್ಚಾಗಿ ಬೆಳೆಯುವ ಟೊಮೇಟೊ ಮತ್ತಿತರ ತರಕಾರಿಗಳನ್ನೂ ಸಹ ದೇಶದ ವಿವಿಧ ನಗರಗಳಿಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು . 

ಬಂಗಾರಪೇಟೆ , ಕೋಲಾರ , ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ಸೇರುವ ರೈಲು ಮಾರ್ಗವನ್ನು ವಿದ್ಯುತೀಕರಣ ಗೊಳಿಸಲಾಗುವುದು . ಈ ಕಾರ್ಯಕ್ಕೆ  ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಿದರು.


 ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ , ಕಿಸಾನ್ ರೈಲು ಸಂಕಷ್ಟದಲ್ಲಿರುವ ರೈತರಿಗೆ ವರದಾನವಾಗಲಿದೆ . ಮೊದಲ ಬಾರಿಗೆ ಇಲ್ಲಿಂದ ದೆಹಲಿಯ ಆದರ್ಶ ನಗರಕ್ಕೆ ೨೫೦ ಟನ್ ಮಾವಿನ ಹಣ್ಣನ್ನು ಕಳಿಸಲಾಗುತ್ತಿದೆ . ರೈತರ ಹಿತದೃಷ್ಟಿಯಿಂದ ಈ ಪ್ರಕ್ರಿಯೆ ಮುಂದುವರಿಯಲಿದ್ದು , ಹೆಚ್ಚಿನ ಅನುಕೂಲವಾಗುವುದು .ರೈತರು ನೇರವಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಸೇವೆ ಪಡೆದುಕೊಳ್ಳಬೇಕು ಎಂದು ನುಡಿದರು . ರೈಲ್ವೆ ಉಪ ವ್ಯವಸ್ಥಾಪಕ ಅಶೋಕ್ ಕುಮಾರ್ ಶರ್ಮ , ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್. ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ರೆಡ್ಡಿ , ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ , ಮಾಜಿ ಅಧ್ಯಕ್ಷ ಬಂಡಪಲ್ಲಿ ಚಂದ್ರಾರೆಡ್ಡಿ , ಮುಖಂಡರಾದ ಎಂ.ಲಕ್ಷ್ಮಣಗೌಡ , ನಾರಾಯಣಸ್ವಾಮಿ , ಪುರಸಭಾ ಸದಸ್ಯರಾದ ನಾಗರಾಜ್ , ಪತಿವ್ವಲ್ಲಾ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು