7:42 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಹೊಣೆ, ಆರೋಪಿಗಳ ಗಲ್ಲಿಗೇರಿಸಿ: ಶಾಸಕ ವೇದ್ಯಾಸ ಕಾಮತ್

01/07/2022, 19:46

ಮಂಗಳೂರು(reporterkarnataka.com): ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಮತಾಂಧ ಮನೋಭಾವ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ರಾಜಕೀಯ ದೃಷ್ಟಿಯಿಂದ ಖಂಡಿಸದಿರುವ ನಾಯಕರ ಓಲೈಕೆಯ ರಾಜಕಾರಣದಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹೇಳಿದ್ದಾರೆ.

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಕಾರಣ. ಜೀವ ಬೆದರಿಕೆಯಿರುವ ಬಗ್ಗೆ ಕನ್ನಯ್ಯ ಲಾಲ್ ದೂರು ನೀಡಿದ್ದರೂ ಸೂಕ್ತ ಭದ್ರತೆ ಕಲ್ಪಿಸದ ರಾಜಸ್ಥಾನ ಸರಕಾರ ಘಟನೆಗೆ ನೇರ ಹೊಣೆಯಾಗಿದೆ. ಹಿಂದುಗಳ ಜೀವವನ್ನು ತೃಣದಂತೆ ಕಾಣುವ ಕಾಂಗ್ರೇಸ್ ನಾಯಕರು ಈ ಘಟನೆಗೆ ಜವಾಬ್ದಾರರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು