12:57 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಹೊಣೆ, ಆರೋಪಿಗಳ ಗಲ್ಲಿಗೇರಿಸಿ: ಶಾಸಕ ವೇದ್ಯಾಸ ಕಾಮತ್

01/07/2022, 19:46

ಮಂಗಳೂರು(reporterkarnataka.com): ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಮತಾಂಧ ಮನೋಭಾವ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ರಾಜಕೀಯ ದೃಷ್ಟಿಯಿಂದ ಖಂಡಿಸದಿರುವ ನಾಯಕರ ಓಲೈಕೆಯ ರಾಜಕಾರಣದಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹೇಳಿದ್ದಾರೆ.

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಕಾರಣ. ಜೀವ ಬೆದರಿಕೆಯಿರುವ ಬಗ್ಗೆ ಕನ್ನಯ್ಯ ಲಾಲ್ ದೂರು ನೀಡಿದ್ದರೂ ಸೂಕ್ತ ಭದ್ರತೆ ಕಲ್ಪಿಸದ ರಾಜಸ್ಥಾನ ಸರಕಾರ ಘಟನೆಗೆ ನೇರ ಹೊಣೆಯಾಗಿದೆ. ಹಿಂದುಗಳ ಜೀವವನ್ನು ತೃಣದಂತೆ ಕಾಣುವ ಕಾಂಗ್ರೇಸ್ ನಾಯಕರು ಈ ಘಟನೆಗೆ ಜವಾಬ್ದಾರರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು