2:17 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು

01/07/2022, 22:09

ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ.

ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚೆಂಬು ಹಾಗೂ ಪೆರಾಜೆಯಿಂದ 5.1 ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 2.1 ರಷ್ಟು ಭೂಕಂಪನವಾಗಿರುವುದಾಗಿ ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

ಕಂಪನದ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ಉತ್ತರ ವಾಯುವ್ಯ ದಿಕ್ಕಿನಲ್ಲಿ 9.1 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.6 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 11.3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಪ್ರದೇಶದ 20-30 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು