11:04 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಬೆಂಗ್ರೆ ಸ್ಯಾಂಡ್ಸ್ ಪಿಟ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡದ ಭೂಮಿ ಪೂಜೆ, ವಿದ್ಯಾರ್ಥಿ ಸಂಘ ಉದ್ಘಾಟನೆ

01/07/2022, 23:18

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಬೆಂಗ್ರೆ ಸ್ಯಾಂಡ್ಸ್ ಪಿಟ್ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ದ ಭೂಮಿ ಪೂಜೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಭೂಮಿಪೂಜೆಯನ್ನು  ಹಳೆ ವಿದ್ಯಾರ್ಥಿ ಪ್ರೊ. ಬೆಂಗ್ರೆ ನಾರಾಯಣ ಕರ್ಕೇರ ನೆರವೇರಿಸಿದರು. ಅವರು ಮಾತನಾಡಿ, ಪೇಟೆಂಟ್ ಮಾರಾಟ ಮಾಡಿದ ಹಣದಿಂದ ಹಾಗೂ ತಮ್ಮ ಕುಟುಂಬಸ್ಥರ ನೆರವಿನಿಂದ  ನಮ್ಮ  ಕೈಲಾದ ಮಟ್ಟಿನಲ್ಲಿ ಶಾಲೆಗೆ ಒಂದು ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡಿದ್ದೇನೆ. ಇದೇ ರೀತಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇನ್ನಷ್ಟು ಧನ ಸಹಾಯ ಹರಿದು ಬರಲಿ ಎಂದರು.


ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದ  ದ. ಕ ಜಿಲ್ಲಾ ಘಟಕದ ಚೇರ್ ಮೇನ್ ಶಾಂತ ರಾಮ್ ಶೆಟ್ಟಿ ಮಾತನಾಡಿದರು.


ಶಾಲಾ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮಿ ಕುಡುಪು ಮಾತನಾಡಿ, ಶಾಲಾ ಅಭಿವೃದ್ಧಿ ಕಾರ್ಯದಲ್ಲಿ ಹಳೆ  ವಿದ್ಯಾರ್ಥಿ ಸಂಘದ ಪಾತ್ರ ಈ ಭೂಮಿ ಪೂಜೆಯ ಹಿಂದಿನ ಕೈಚಳಕ. ಇಂತಹ ಹಳೆ ವಿದ್ಯಾರ್ಥಿಗಳ ಸಂಘಗಳಿಂದ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದರು.


ಮುಖ್ಯ ಅತಿಥಿಗಳಾಗಿ ಮಹಾಜನ ಸಭೆ ಅಧ್ಯಕ್ಷ ಕೇಶವ ಕರ್ಕೇರ, ಮಂಗಳೂರು ಬಂದರು ಪ್ರಾಧಿಕಾರದ ಟ್ರಸ್ಟಿ ಭರತ್ ಕುಮಾರ್ ಎರ್ಮಾಳ್, ಮತ್ಸ್ತ್ಯೋದ್ಯಮಿ ಮೋಹನ್ ಬೆಂಗ್ರೆ, ಶಿಕ್ಷಣ ಇಲಾಖೆಯ ಸಿ. ಆರ್. ಪಿ. ಹೇಮಂತ್  ಕುಲಾಲ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ರಾಕೇಶ್ ಸುವರ್ಣ, ಶಾಲಾ ಶಿಕ್ಷಕರಾದ ಅಶ್ವಿನಿ , ಸುಮಾ, ದೀಪಾ, ವರ್ಷಾ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಪ್ರೊ. ಬೆಂಗ್ರೆ ಅವರನ್ನು ಸನ್ಮಾನಿಸಲಾಯಿತು


ಶಿಕ್ಷಕಿ ಉಷಾ ಕೆ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು