8:26 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬೆಂಗ್ರೆ ಸ್ಯಾಂಡ್ಸ್ ಪಿಟ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡದ ಭೂಮಿ ಪೂಜೆ, ವಿದ್ಯಾರ್ಥಿ ಸಂಘ ಉದ್ಘಾಟನೆ

01/07/2022, 23:18

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಬೆಂಗ್ರೆ ಸ್ಯಾಂಡ್ಸ್ ಪಿಟ್ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ದ ಭೂಮಿ ಪೂಜೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಭೂಮಿಪೂಜೆಯನ್ನು  ಹಳೆ ವಿದ್ಯಾರ್ಥಿ ಪ್ರೊ. ಬೆಂಗ್ರೆ ನಾರಾಯಣ ಕರ್ಕೇರ ನೆರವೇರಿಸಿದರು. ಅವರು ಮಾತನಾಡಿ, ಪೇಟೆಂಟ್ ಮಾರಾಟ ಮಾಡಿದ ಹಣದಿಂದ ಹಾಗೂ ತಮ್ಮ ಕುಟುಂಬಸ್ಥರ ನೆರವಿನಿಂದ  ನಮ್ಮ  ಕೈಲಾದ ಮಟ್ಟಿನಲ್ಲಿ ಶಾಲೆಗೆ ಒಂದು ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡಿದ್ದೇನೆ. ಇದೇ ರೀತಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇನ್ನಷ್ಟು ಧನ ಸಹಾಯ ಹರಿದು ಬರಲಿ ಎಂದರು.


ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದ  ದ. ಕ ಜಿಲ್ಲಾ ಘಟಕದ ಚೇರ್ ಮೇನ್ ಶಾಂತ ರಾಮ್ ಶೆಟ್ಟಿ ಮಾತನಾಡಿದರು.


ಶಾಲಾ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮಿ ಕುಡುಪು ಮಾತನಾಡಿ, ಶಾಲಾ ಅಭಿವೃದ್ಧಿ ಕಾರ್ಯದಲ್ಲಿ ಹಳೆ  ವಿದ್ಯಾರ್ಥಿ ಸಂಘದ ಪಾತ್ರ ಈ ಭೂಮಿ ಪೂಜೆಯ ಹಿಂದಿನ ಕೈಚಳಕ. ಇಂತಹ ಹಳೆ ವಿದ್ಯಾರ್ಥಿಗಳ ಸಂಘಗಳಿಂದ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದರು.


ಮುಖ್ಯ ಅತಿಥಿಗಳಾಗಿ ಮಹಾಜನ ಸಭೆ ಅಧ್ಯಕ್ಷ ಕೇಶವ ಕರ್ಕೇರ, ಮಂಗಳೂರು ಬಂದರು ಪ್ರಾಧಿಕಾರದ ಟ್ರಸ್ಟಿ ಭರತ್ ಕುಮಾರ್ ಎರ್ಮಾಳ್, ಮತ್ಸ್ತ್ಯೋದ್ಯಮಿ ಮೋಹನ್ ಬೆಂಗ್ರೆ, ಶಿಕ್ಷಣ ಇಲಾಖೆಯ ಸಿ. ಆರ್. ಪಿ. ಹೇಮಂತ್  ಕುಲಾಲ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ರಾಕೇಶ್ ಸುವರ್ಣ, ಶಾಲಾ ಶಿಕ್ಷಕರಾದ ಅಶ್ವಿನಿ , ಸುಮಾ, ದೀಪಾ, ವರ್ಷಾ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಪ್ರೊ. ಬೆಂಗ್ರೆ ಅವರನ್ನು ಸನ್ಮಾನಿಸಲಾಯಿತು


ಶಿಕ್ಷಕಿ ಉಷಾ ಕೆ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು