10:48 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮತ್ತೆ ಮತ್ತೆ ಭೂಕಂಪನ: ನಡುಗಿದ ಕಲ್ಲುಗುಂಡಿ, ಸಂಪಾಜೆ; ಭಯಬೇಡ, ಪಶ್ಚಾತ್ ಕಂಪನ ಅಷ್ಟೇ 

02/07/2022, 09:54

ಮಡಿಕೇರಿ(reporterkarnataka.com):
ಕೊಡಗು ಹಾಗೂ ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದೆ. ಇಂದು ಮುಂಜಾನೆ ‌ಭೂಮಿ ನಡುಗಿದೆ ಎಂಬ ಮಾಹಿತಿ ಇದೆ. ಭೂಕಂಪನದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದೆ. ಕಲ್ಲುಗುಂಡಿ , ಸಂಪಾಜೆ ಭಾಗಗಳಲ್ಲಿ ಭೂಮಿ ನಡುಗಿದೆ ಎನ್ನಲಾಗಿದೆ.

ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಂತಹ ‌ಸಂದೇಶಗಳಿಂದ ಜನರು ಭಯಪಡಬಾರದು. ಒಮ್ಮೆ ಕಂಪನವಾದಲ್ಲಿ ಅದರ ಪರಿಣಾಮ ಕೆಲವು ದಿನಗಳವರೆಗೆ ಇರುತ್ತದೆ. ಭೂಮಿಯ ಕೆಳಭಾಗದಲ್ಲಿ ನಡೆಯುತ್ತಿರುವ ನೈಸರ್ಗಿಕ ವಿದ್ಯಮಾನಗಳ ಪರಿಣಾಮ ಸಣ್ಣನೆಯ ಕಂಪನಗಳು ಸಂಭವಿಸಬಹುದು.

ಭೂಸ್ತರಭಂಗದಿಂದ ಕೆಲವು ದಿನ ಈ ನಡುಕ, ಕಂಪನಗಳು ನಡೆಯುವ ಸಾಧ್ಯತೆ ಇದ್ದು ಜನ ಆತಂಕಪಡಬೇಕಿಲ್ಲ ಎಂದು ಭೂಗರ್ಭ ತಜ್ಞರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು