5:05 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ…

ಇತ್ತೀಚಿನ ಸುದ್ದಿ

ಮತ್ತೆ ಮತ್ತೆ ಭೂಕಂಪನ: ನಡುಗಿದ ಕಲ್ಲುಗುಂಡಿ, ಸಂಪಾಜೆ; ಭಯಬೇಡ, ಪಶ್ಚಾತ್ ಕಂಪನ ಅಷ್ಟೇ 

02/07/2022, 09:54

ಮಡಿಕೇರಿ(reporterkarnataka.com):
ಕೊಡಗು ಹಾಗೂ ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದೆ. ಇಂದು ಮುಂಜಾನೆ ‌ಭೂಮಿ ನಡುಗಿದೆ ಎಂಬ ಮಾಹಿತಿ ಇದೆ. ಭೂಕಂಪನದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದೆ. ಕಲ್ಲುಗುಂಡಿ , ಸಂಪಾಜೆ ಭಾಗಗಳಲ್ಲಿ ಭೂಮಿ ನಡುಗಿದೆ ಎನ್ನಲಾಗಿದೆ.

ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಂತಹ ‌ಸಂದೇಶಗಳಿಂದ ಜನರು ಭಯಪಡಬಾರದು. ಒಮ್ಮೆ ಕಂಪನವಾದಲ್ಲಿ ಅದರ ಪರಿಣಾಮ ಕೆಲವು ದಿನಗಳವರೆಗೆ ಇರುತ್ತದೆ. ಭೂಮಿಯ ಕೆಳಭಾಗದಲ್ಲಿ ನಡೆಯುತ್ತಿರುವ ನೈಸರ್ಗಿಕ ವಿದ್ಯಮಾನಗಳ ಪರಿಣಾಮ ಸಣ್ಣನೆಯ ಕಂಪನಗಳು ಸಂಭವಿಸಬಹುದು.

ಭೂಸ್ತರಭಂಗದಿಂದ ಕೆಲವು ದಿನ ಈ ನಡುಕ, ಕಂಪನಗಳು ನಡೆಯುವ ಸಾಧ್ಯತೆ ಇದ್ದು ಜನ ಆತಂಕಪಡಬೇಕಿಲ್ಲ ಎಂದು ಭೂಗರ್ಭ ತಜ್ಞರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು