4:39 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡಲನಗರಿಯಿಂದ ದಿಲ್ಲಿಗೆ ನೇರ ವಿಮಾನ ಯಾನ ಸೇವೆ ಆರಂಭ: ಮಂಗಳೂರಿಗರ ಬಹುದಿನಗಳ ಕನಸು ನನಸು

02/07/2022, 20:02

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಿಂದ ರಾಷ್ಟ್ರದ ರಾಜಧಾನಿ ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಇದರೊಂದಿಗೆ ಕುಡ್ಲ – ದೆಹಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದೆ.

ಇಂಡಿಗೋ ವಿಮಾನ ಸಂಸ್ಥೆಯು ತನ್ನ ಮೊದಲ ಸಂಚಾರವನ್ನು ಶುಕ್ರವಾರ ಆರಂಭಿಸಿದೆ.

ದಿಲ್ಲಿಯಿಂದ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅದೇ ರೀತಿ 140 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಹೊತ್ತೊಯ್ದ ವಿಮಾನವು 10.40ಕ್ಕೆ ಮರಳಿ ದಿಲ್ಲಿ ತಲುಪಿದೆ.

ವಾರದಲ್ಲಿ ಸೋಮವಾರ , ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸೇರಿದಂತೆ ವಾರದಲ್ಲಿ ನಾಲ್ಕು ದಿನಗಳಲ್ಲಿ ಈ ವಿಮಾನ ಸಂಚಾರ ಇರಲಿದೆ. ಈಗಾಗಲೇ ಮಂಗಳೂರು-ಪೂನಾ-ದಿಲ್ಲಿ ನಡುವೆ ವಿಮಾನ ಸಂಚಾರ ನಡೆಯುತ್ತಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನು ದಿಲ್ಲಿ ನೇರ ವಿಮಾನದಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು