1:28 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಸತತ ಭೂಕಂಪಕ್ಕೆ ತುತ್ತಾದ ಚೆಂಬು ಗ್ರಾಮದಲ್ಲಿ  ವರುಣನ ಆರ್ಭಟ: ಭಾರೀ ಭೂಕುಸಿತ, ಮನೆಗೆ ತೀವ್ರ ಹಾನಿ

02/07/2022, 20:38

ಮಡಿಕೇರಿ(reporterkarnataka.com): ಸತತವಾಗಿ ನಾಲ್ಕು ಬಾರಿ ಭೂಕಂಪನಕ್ಕೊಳಗಾಗಿರುವ ದ.ಕ ಹಾಗೂ ಕೊಡಗು ಗಡಿ ಪ್ರದೇಶಕ್ಕೆ ಅಂಟಿಕೊಂಡಿರುವ ಚೆಂಬು ಗ್ರಾಮದಲ್ಲಿ ಶನಿವಾರ ಭೂಕುಸಿತ ಉಂಟಾಗಿದ್ದು, ಮನೆಯೊಂದು ಜಖಂಗೊಂಡಿದೆ.

ಶನಿವಾರ ಬೆಳಗಿನ ಜಾವ 3 ಗಂಟೆಗೆ ಚೆಂಬು ಗ್ರಾಮದ ಪೂಜಾರಿಗದ್ದೆ ಗಿರಿಧರ್ ಎಂಬವರ ಮನೆಯ ಮೇಲೆ ಭಾರೀ ಶಬ್ಧದೊಂದಿಗೆ ಮಣ್ಣು ಕುಸಿದಿದ್ದು, ಮನೆಯ ಒಂದು ಭಾಗ ಜಖಂಗೊಂಡಿದೆ.

ಭಾರೀ ಮಳೆ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಚೆಂಬುವಿನಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 192 ಮಿಮೀ ಮಳೆಯಾಗಿದ್ದು, ರಾತ್ರಿಯಿಡೀ ಸುರಿದ ಭಾರೀ ಮಳೆಯೇ ಭೂ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ.

ಚೆಂಬು ಪೆರಾಜೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭೂಕಂಪನವಾಗಿರುವುದರಿಂದ ಮಳೆ ನೀರು ಭೂಮಿಯೊಳಗೆ ಇಂಗಿ ಭೂಕುಸಿತ ಸಂಭವಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯ ಗಡಿಭಾಗದ ಜನರಲ್ಲಿ ಭೂಕಂಪನ ಸಾಕಷ್ಟು ಆತಂಕವನ್ನು ಸೃಷ್ಡಿಸಿದೆ.

ಮತ್ತೆ ಕಂಪನ: ಚೆಂಬುವಿನಲ್ಲಿ ಶನಿವಾರ ಮಧ್ಯಾಹ್ನ 1.21ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು