1:16 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಬೈಕ್ ಕಳ್ಳತನ ಮಾಡುತ್ತಿದ್ದ ಯುವ ಗ್ಯಾಂಗ್ ಪೊಲೀಸ್ ಬಲೆಗೆ: ಅಥಣಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

03/07/2022, 02:16

ರಾಹುಲ್ ಬೆಳಗಾವಿ
info.reporterkarnataka@gmail.com

ಹಲವು ದಿನಗಳಿಂದ ಅಥಣಿ ತಾಲೂಕಿನಲ್ಲಿ ನಡೆಯುತ್ತಿದ್ದ ಬೈಕ್ ಕಳ್ಳತನಕ್ಕೆ ಅಥಣಿ ಪೊಲೀಸರು ಬ್ರೇಕ್ ಹಾಕಿದ್ದಾರೆ. 6ಕ್ಕೂ ಹೆಚ್ಚು ಬೈಕ್ ಕಳ್ಳತನ ಮಾಡಿದ ಗ್ಯಾಂಗ್ ನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಪೋಲಿಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ,  ಹೆಚ್ಚುವರಿ ಪೋಲಿಸ್ ಅಧಿಕ್ಷಕ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಪಿಎಸ್ಐ ಕುಮಾರ ಹಾಡಕಾರ ಅವರ ನೇತೃತ್ವದಲ್ಲಿ ತಂಡ ಬಲೆ ಬೀಸಿ 3 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸತ್ತಿ ಗ್ರಾಮದ ಆನಂದ ಗುಳಗಾವಿ (20), ಪವನ ಗಾಯಕವಾಡ (20) ಹಾಗೂ ಬರಮಖೋಡಿ ಗ್ರಾಮದ ವಿಕ್ರಮ ಸಾಳುಂಕೆ (20) ಎಂದು ತಿಳಿದು ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಡಿವೈಎಸ್ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸನಗೌಡ ಅವರ ಮಾರ್ಗದರ್ಶನದಂತೆ ಪಿಎಸ್ಐ ಕುಮಾರ ಹಾಡಕರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚನೆ ಮಾಡಿ ಸತತ ಕಾರ್ಯಾಚಣೆ ನಡೆಸಿ ಮೋಟಾರ್ ಸೈಕಲ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೋಲಿಸ್ ಇಲಾಖೆ ಯಶಸ್ವಿಯಾಗಿದೆ. 


ಈ ವೇಳೆ ವಿ ಜಿ ಆರೇರ, ಬಿ ಜೆ ತಳವಾರ, ಎ ಎ ಇರಕರ, ಜಿ ಎಚ್ ಹೊನವಾಡ, ಜಮೀರ ಡಾಂಗೆ, ಕೆ ಬಿ ಸಿರಗೂರ, ಆರ್ ಸಿ ಹಾದಿಮನಿ, ಎಮ್ ಎಮ್ ಖೋತ್ ಸೇರಿದಂತೆ ಇತರರು ತಂಡದಲ್ಲಿ ಭಾಗಿಯಾಗಿದ್ದರು.

ಪೊಲೀಸರ ಕಾರ್ಯಕ್ಕೆ ಜನ ಸಾಮಾನ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು