6:08 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಬೈಕ್ ಕಳ್ಳತನ ಮಾಡುತ್ತಿದ್ದ ಯುವ ಗ್ಯಾಂಗ್ ಪೊಲೀಸ್ ಬಲೆಗೆ: ಅಥಣಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

03/07/2022, 02:16

ರಾಹುಲ್ ಬೆಳಗಾವಿ
info.reporterkarnataka@gmail.com

ಹಲವು ದಿನಗಳಿಂದ ಅಥಣಿ ತಾಲೂಕಿನಲ್ಲಿ ನಡೆಯುತ್ತಿದ್ದ ಬೈಕ್ ಕಳ್ಳತನಕ್ಕೆ ಅಥಣಿ ಪೊಲೀಸರು ಬ್ರೇಕ್ ಹಾಕಿದ್ದಾರೆ. 6ಕ್ಕೂ ಹೆಚ್ಚು ಬೈಕ್ ಕಳ್ಳತನ ಮಾಡಿದ ಗ್ಯಾಂಗ್ ನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಪೋಲಿಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ,  ಹೆಚ್ಚುವರಿ ಪೋಲಿಸ್ ಅಧಿಕ್ಷಕ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಪಿಎಸ್ಐ ಕುಮಾರ ಹಾಡಕಾರ ಅವರ ನೇತೃತ್ವದಲ್ಲಿ ತಂಡ ಬಲೆ ಬೀಸಿ 3 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸತ್ತಿ ಗ್ರಾಮದ ಆನಂದ ಗುಳಗಾವಿ (20), ಪವನ ಗಾಯಕವಾಡ (20) ಹಾಗೂ ಬರಮಖೋಡಿ ಗ್ರಾಮದ ವಿಕ್ರಮ ಸಾಳುಂಕೆ (20) ಎಂದು ತಿಳಿದು ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಡಿವೈಎಸ್ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸನಗೌಡ ಅವರ ಮಾರ್ಗದರ್ಶನದಂತೆ ಪಿಎಸ್ಐ ಕುಮಾರ ಹಾಡಕರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚನೆ ಮಾಡಿ ಸತತ ಕಾರ್ಯಾಚಣೆ ನಡೆಸಿ ಮೋಟಾರ್ ಸೈಕಲ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೋಲಿಸ್ ಇಲಾಖೆ ಯಶಸ್ವಿಯಾಗಿದೆ. 


ಈ ವೇಳೆ ವಿ ಜಿ ಆರೇರ, ಬಿ ಜೆ ತಳವಾರ, ಎ ಎ ಇರಕರ, ಜಿ ಎಚ್ ಹೊನವಾಡ, ಜಮೀರ ಡಾಂಗೆ, ಕೆ ಬಿ ಸಿರಗೂರ, ಆರ್ ಸಿ ಹಾದಿಮನಿ, ಎಮ್ ಎಮ್ ಖೋತ್ ಸೇರಿದಂತೆ ಇತರರು ತಂಡದಲ್ಲಿ ಭಾಗಿಯಾಗಿದ್ದರು.

ಪೊಲೀಸರ ಕಾರ್ಯಕ್ಕೆ ಜನ ಸಾಮಾನ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು