8:47 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಗಡಿ ಗ್ರಾಮಗಳಲ್ಲಿ ನಿದ್ದೆ ಬಾರದ ರಾತ್ರಿಗಳು!!: ಭೂಕಂಪನ, ಭೂಕುಸಿತ, ವರ್ಷಧಾರೆಗೆ ತತ್ತರಿಸಿದ ಕೊಡಗು

03/07/2022, 13:13

ಕವಿತಾ ಪೊನ್ನಪ್ಪ ತಲಕಾವೇರಿ ಮಡಿಕೇರಿ

info.reporterkarnataka@gmail.com

ಕಳೆದ ಮುಂಗಾರಿನಲ್ಲಿ ಘೋರ ದುರಂತಕ್ಕೆ ಸಾಕ್ಷಿಯಾದ ಕೊಡಗು ಜಿಲ್ಲೆ ಈ ಬಾರಿಯೂ ಮಳೆಗಾಲ ಶುರುವಾದ ಬಳಿಕ ಮತ್ತೆ ಸಂಕಷ್ಟಕ್ಕೀಡಾಗಿದೆ. ಕಳೆದ ಬಾರಿ ಪ್ರವಾಹ, ಭೂಕುಸಿತ ಉಂಟಾದರೆ, ಈ ಬಾರಿ ಭೂಕಂಪನ ಹೊಸತಾಗಿ ಸೇರ್ಪಡೆಯಾಗಿದೆ.

ಭೂಕಂಪನ, ಸತತ ಮಳೆ, ಭೂಕುಸಿತಕ್ಕೆ ಕೊಡಗು-ದಕ್ಷಿಣ ಗಡಿ ಭಾಗದ ಪ್ರದೇಶಗಳು ಸಂಪೂರ್ಣ ನಲುಗಿ ಹೋಗಿದೆ. ಸ್ಥಳೀಯ ನಾಗರಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ನಡೆಸುತ್ತಿದ್ದಾರೆ.

ಯಾವಾಗ, ಏನಾಗುತ್ತದೋ ಎಂಬ ಆತಂಕ ಅವರಲ್ಲಿ ಮನೆ ಮಾಡಿದೆ.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಭಾಗದ ಸಂಪಾಜೆ, ಕರಿಂಜೆ, ಚೆಂಬು ಮುಂತಾದ ಪ್ರದೇಶ ಮಾತ್ರವಲ್ಲದೆ, ಕಳೆದ ಬಾರಿ ಘೋರ ದುರಂತ ಕಂಡ ಭಾಗಮಂಡಲ ಸಹಿತ ಸುತ್ತಮುತ್ತಲಿನ ಐದು ಗ್ರಾಮದ ಜನತೆ ನಿದ್ದೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ. ಪ್ರತಿ ಮನೆಯಿಂದ ಒಬ್ಬ ಇಬ್ಬರು ರಾತ್ರಿ ವೇಳೆ ಸರದಿಯಲ್ಲಿ ಎಚ್ಚರದಲ್ಲಿರುತ್ತಾರೆ. ಯಾವಾಗ ಭೂಕಂಪನವಾಗುತ್ತೋ, ಯಾವಾಗ ಭೂಕುಸಿತ ಉಂಟಾಗುತ್ತದೋ ಎಂದು ಎಚ್ಚರಿಕೆಯಿಂದ ಇರುತ್ತಾರೆ. ಮಳೆ ಮುಂದುವರಿದಿರುವಂತೆಯೇ ಗಡಿ ಭಾಗವಾದ ಕರಿಕೆ, ಸಂಪಾಜೆ, ಪೆರಾಜೆ, ಚೆಂಬು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕವೂ ಹೆಚ್ಚುತ್ತಿದೆ. ಶನಿವಾರ ಒಂದೇ ದಿನ ಚೆಂಬು ಪರಿಸರದಲ್ಲಿ ಎರಡು ಬಾರಿ ಮತ್ತೆ ಭೂಮಿ ನಡುಗಿದೆ. ಆಡಳಿತಗಳು ಆತಂಕಪಡುವ ಅಗತ್ಯವಿಲ್ಲ ಎನ್ನುತ್ತಿದ್ದರೂ, ಇಲ್ಲಿನ ಜನತೆಯ ಕ್ಷಣ ಕ್ಷಣದ ಆತಂಕ ಮಾತ್ರ ಹೆಚ್ಚುತ್ತಲೇ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು