7:48 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಗಡಿ ಗ್ರಾಮಗಳಲ್ಲಿ ನಿದ್ದೆ ಬಾರದ ರಾತ್ರಿಗಳು!!: ಭೂಕಂಪನ, ಭೂಕುಸಿತ, ವರ್ಷಧಾರೆಗೆ ತತ್ತರಿಸಿದ ಕೊಡಗು

03/07/2022, 13:13

ಕವಿತಾ ಪೊನ್ನಪ್ಪ ತಲಕಾವೇರಿ ಮಡಿಕೇರಿ

info.reporterkarnataka@gmail.com

ಕಳೆದ ಮುಂಗಾರಿನಲ್ಲಿ ಘೋರ ದುರಂತಕ್ಕೆ ಸಾಕ್ಷಿಯಾದ ಕೊಡಗು ಜಿಲ್ಲೆ ಈ ಬಾರಿಯೂ ಮಳೆಗಾಲ ಶುರುವಾದ ಬಳಿಕ ಮತ್ತೆ ಸಂಕಷ್ಟಕ್ಕೀಡಾಗಿದೆ. ಕಳೆದ ಬಾರಿ ಪ್ರವಾಹ, ಭೂಕುಸಿತ ಉಂಟಾದರೆ, ಈ ಬಾರಿ ಭೂಕಂಪನ ಹೊಸತಾಗಿ ಸೇರ್ಪಡೆಯಾಗಿದೆ.

ಭೂಕಂಪನ, ಸತತ ಮಳೆ, ಭೂಕುಸಿತಕ್ಕೆ ಕೊಡಗು-ದಕ್ಷಿಣ ಗಡಿ ಭಾಗದ ಪ್ರದೇಶಗಳು ಸಂಪೂರ್ಣ ನಲುಗಿ ಹೋಗಿದೆ. ಸ್ಥಳೀಯ ನಾಗರಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ನಡೆಸುತ್ತಿದ್ದಾರೆ.

ಯಾವಾಗ, ಏನಾಗುತ್ತದೋ ಎಂಬ ಆತಂಕ ಅವರಲ್ಲಿ ಮನೆ ಮಾಡಿದೆ.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಭಾಗದ ಸಂಪಾಜೆ, ಕರಿಂಜೆ, ಚೆಂಬು ಮುಂತಾದ ಪ್ರದೇಶ ಮಾತ್ರವಲ್ಲದೆ, ಕಳೆದ ಬಾರಿ ಘೋರ ದುರಂತ ಕಂಡ ಭಾಗಮಂಡಲ ಸಹಿತ ಸುತ್ತಮುತ್ತಲಿನ ಐದು ಗ್ರಾಮದ ಜನತೆ ನಿದ್ದೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ. ಪ್ರತಿ ಮನೆಯಿಂದ ಒಬ್ಬ ಇಬ್ಬರು ರಾತ್ರಿ ವೇಳೆ ಸರದಿಯಲ್ಲಿ ಎಚ್ಚರದಲ್ಲಿರುತ್ತಾರೆ. ಯಾವಾಗ ಭೂಕಂಪನವಾಗುತ್ತೋ, ಯಾವಾಗ ಭೂಕುಸಿತ ಉಂಟಾಗುತ್ತದೋ ಎಂದು ಎಚ್ಚರಿಕೆಯಿಂದ ಇರುತ್ತಾರೆ. ಮಳೆ ಮುಂದುವರಿದಿರುವಂತೆಯೇ ಗಡಿ ಭಾಗವಾದ ಕರಿಕೆ, ಸಂಪಾಜೆ, ಪೆರಾಜೆ, ಚೆಂಬು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕವೂ ಹೆಚ್ಚುತ್ತಿದೆ. ಶನಿವಾರ ಒಂದೇ ದಿನ ಚೆಂಬು ಪರಿಸರದಲ್ಲಿ ಎರಡು ಬಾರಿ ಮತ್ತೆ ಭೂಮಿ ನಡುಗಿದೆ. ಆಡಳಿತಗಳು ಆತಂಕಪಡುವ ಅಗತ್ಯವಿಲ್ಲ ಎನ್ನುತ್ತಿದ್ದರೂ, ಇಲ್ಲಿನ ಜನತೆಯ ಕ್ಷಣ ಕ್ಷಣದ ಆತಂಕ ಮಾತ್ರ ಹೆಚ್ಚುತ್ತಲೇ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು