9:51 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿಯ ನಾಣ್ಯಾಪುರ ಗ್ರಾಮದಲ್ಲಿಯೇ ಪಡಿತರ ವಿತರಣೆ ಕ್ರಮ: ವಂದೇ ಮಾತರಂ ಆಗ್ರಹ

03/07/2022, 20:33

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದಲ್ಲಿ 300 ಮಂದಿ ಪಡಿತರ ಚೀಟಿಗಮ ಪಲಾನುಭವಿಗಳಿದ್ದು, ಪಡಿತರ ಪಡೆಯಲು 2 ಕಿಮೀ ದೂರದ ಹೊಸಕೇರಿ ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಗೆ ತೆರಳಬೇಕಾದ ದುಸ್ಥಿತಿ ಎದುರಾಗಿದೆ.

ಇದರಿಂದ ಸರ್ಕಾರ ನೀಡುವ ಉಚಿತ ಪಡಿತರ ಧಾನ್ಯ ನಾಣ್ಯಾಪುರ ಪಡಿತರ ಫಲಾನುಭವಿಗಳಿಗೆ, ಬಲು ದುಬಾರಿಯಾಗಿ ಪರಿಣಮಿಸಿದೆ. ಕಾರಣ 2 ಕಿಮೀ ಕ್ರಮಿಸಲು ಪಡಿತರ ಪಲಾನುಭವಿಗಳು ಆಟೋಗಳನ್ನು ಅವಲಂಬಿಸಬೇಕಾಗಿದೆ. ಇವರು ಪಡಿತರ ಪಡೆಯಲು ಪ್ರತಿ ತಿಂಗಳು 20ರಿಂದ 30 ರೂ. ವ್ಯಯಿಸಬೇಕಿದೆ. ತಾಲೂಕಾಡಳಿತ ಹಾಗೂ ಆಹಾರ ಇಲಾಖೆಯ ಅವೈಜ್ಞಾನಿಕ ಕ್ರಮದಿಂದಾಗಿ, ಸರ್ಕಾರ ಕೊಡೋ ಪುಕ್ಕಟೆ ಪಡಿತರ ನಾಣ್ಯಾಪುರ ಗ್ರಾಮಸ್ಥರಿಗೆ ಬಲು ದುಬಾರಿಯಾಗಿ ಪರಿಣಮಿಸಿದೆ. ವೃದ್ಧರು, ಮಹಿಳೆಯರು, ಮಕ್ಕಳು ಪಡಿತರ ಧಾನ್ಯ ಹೊಂದಲು ಹಣ ಖರ್ಚು ಮಾಡಲೇಬೇಕಿದೆ. ಇದು ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಇದು ಸರ್ಕಾರ ಆಹಾರ ಭದ್ರತೆ ನಿಯಮ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರಿಂದ ಖಂಡನೆ ವ್ಯಕ್ತವಾಗಿದೆ. ಸಂಬಂಧಿಸಿದಂತೆ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡ ವಿ.ಜಿ.ವೃಷಭೇಂದ್ರ ಮಾತನಾಡಿ, ಆಹಾರ ಭದ್ರತಾ ಕಾಯ್ದೆ ಅನ್ವಯ 250 ಪಡಿತರ ಚೀಟಿ ಇರುವೆಡೆ, ಪಲಾನುಭವಿಗಳಿಗೆ ಪಡಿತರ ವಿತರಿಸುವಂತೆ ಸರ್ಕಾರ ನಿಯಮ ರೂಪಿಸಿದೆ. ಇಲ್ಲಿ ನ್ಯಾಯಬೆಲೆ ಅಂಗಡಿಯವರು ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ತಹಶಿಲ್ದಾರರು ಶೀಘ್ರವೇ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ. 

ಹೆಚ್ಚಾಗಿ ಪರಿಶಿಷ್ಟ ಜಾತಿ ಪಂಗಡ ಇರೋ ನಾಣ್ಯಾಪುರ ಗ್ರಾಮದಲ್ಲಿ, ಕಡು ಬಡವರು ಕಾರ್ಮಿಕರು, ರೈತಾಪಿ ವರ್ಗದವರಿದ್ದು, ಅವರಿಗೆ ಹೆಚ್ಚುವರಿ ಖರ್ಚಿನ ಹೊರೆ ಬೀಳಲಿದೆ. ಕಾರಣ ಜಿಲ್ಲಾಧಿಕಾರಿಗಳು ಶೀಘ್ರವೇ ಗಮನಿಸಬೇಕು. ಜುಲೈ ತಿಂಗಳ ಪಡಿತರವನ್ನು ನಾಣ್ಯಾಪುರ ಗ್ರಾಮದಲ್ಲಿಯೇ ವಿತರಿಸುವಂತೆ ಕ್ರಮ ಜರುಗಿಸಬೇಕಿದೆ. ತಹಶೀಲ್ದಾರರಾದ ಶರಣಮ್ಮ ಅವರು ಪ್ರಾಮಾಣಿಕರು ಜನಪರ ಕಾಳಜಿ ಉಳ್ಳವರಾಗಿದ್ದಾರೆ, ಸಂಬಂಧಿಸಿದಂತೆ  ಅವರು ಖುದ್ದು ಪರಿಶೀಲಿಸಿ ನಾಣ್ಯಾಪುರದಲ್ಲಿ ಪಡಿತರ ವಿತರಿಸುವಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ವೃಷಭೇಂದ್ರ ಒತ್ತಾಯಿಸಿದ್ದಾರೆ. 

ನಿರ್ಲಕ್ಷ್ಯ ತೋರಿದ್ದಲ್ಲಿ ಅಥವಾ ಇನ್ನಾವುದೇ ಕಾರಣಕ್ಕೆ ಕೋರಿಕೆಗೆ ಸ್ಪಂದಿಸದಿದ್ದಲ್ಲಿ,  ನ್ಯಾಯಬೆಲೆ ಅಂಗಡಿಯಲ್ಲಿ ಜರುಗುವ ಅಕ್ರಮ ಹಾಗೂ ಅವ್ಯವಹಾರಗಳ ಕುರಿತಂತೆ ದೂರು ನೀಡಲಾಗುವುದು. ಸಂಬಂಧಿಸಿದಂತೆ ವಂದೇ ಮಾತರಂ ಜಾಗೃತಿ ವೇದಿಕೆ ಹಗರಿಬೊಮ್ಮನಹಳ್ಳಿ ಘಟಕ ದಿಂದ, ಕಾನೂನು ರೀತ್ಯಾ ಹೋರಾಟ ನಡೆಸಲಾಗುವುದೆಂದು ಅವರು ಈ ಮೂಲಕ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು