10:28 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ 

03/07/2022, 22:35

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜಿಗೆ ಅನೇಕ ಕೊಡುಗೆ ಸತೀಶ್ ಪಿ. ನೀಡಿದ್ದಾರೆ. ಶಾಲಾ ಕಟ್ಟಡ ರಿಪೇರಿ ಕಾರ್ಯಕ್ರಮದಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶಿಕ್ಷಕಿ ಪ್ಲೇವಿ  ಮಾತನಾಡಿ, ಅವರು ಎಲ್ಲರಿಗೂ ಪ್ರಿಯವಾಗಿರುವ ಉತ್ತಮ ಶಿಕ್ಷಕ, ಜೀವನದ ಎಲ್ಲಾ ವಿಭಾಗಗಳಲ್ಲಿಯು ಸಕ್ಸಸ್ ಪಡೆದಿದ್ದಾರೆ ಎಂದು ನುಡಿದರು.

ಸತೀಶ್ ಪಿ. ಮಾತನಾಡಿ, ಬಡತನದಲ್ಲೇ ಬೆಳೆದರೂ ತಂದೆ  ತಾಯಿ ಶಿಕ್ಷಣಕ್ಕೆ ಯಾವತ್ತು ಅಡ್ಡಿಪಡಿಸಲಿಲ್ಲ. ನಾನು  ಶಿಕ್ಷಕ ನಾಗುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಕಲಿಬೇಕೆಂಬ ಛಲ ಇದ್ದರೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸತೀಶ್ ಪಿ. ದಂಪತಿಯನ್ನು ಸನ್ಮಾನಿಸಲಾಯಿತು.


ಉಪನ್ಯಾಸಕರುಗಳಾದ ಫಿಲೋಮಿನಾ ಲೋಬೊ, ಡಾ. ಶಿವಪ್ರಕಾಶ್, ಅಸುಂಡಿ, ದಿವಾಕರ್ ಶೆಟ್ಟಿ, ಚಂದ್ರಕಲಾ, ಆಶಾ, ಪ್ರಸನ್ನ, ಪ್ರಕಾಶ್ ಹಾಗೂ ಪುತ್ರ  ನಾಗಭೂಷಣ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು