10:29 PM Thursday2 - May 2024
ಬ್ರೇಕಿಂಗ್ ನ್ಯೂಸ್
ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ

ಇತ್ತೀಚಿನ ಸುದ್ದಿ

ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ 

03/07/2022, 22:35

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜಿಗೆ ಅನೇಕ ಕೊಡುಗೆ ಸತೀಶ್ ಪಿ. ನೀಡಿದ್ದಾರೆ. ಶಾಲಾ ಕಟ್ಟಡ ರಿಪೇರಿ ಕಾರ್ಯಕ್ರಮದಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶಿಕ್ಷಕಿ ಪ್ಲೇವಿ  ಮಾತನಾಡಿ, ಅವರು ಎಲ್ಲರಿಗೂ ಪ್ರಿಯವಾಗಿರುವ ಉತ್ತಮ ಶಿಕ್ಷಕ, ಜೀವನದ ಎಲ್ಲಾ ವಿಭಾಗಗಳಲ್ಲಿಯು ಸಕ್ಸಸ್ ಪಡೆದಿದ್ದಾರೆ ಎಂದು ನುಡಿದರು.

ಸತೀಶ್ ಪಿ. ಮಾತನಾಡಿ, ಬಡತನದಲ್ಲೇ ಬೆಳೆದರೂ ತಂದೆ  ತಾಯಿ ಶಿಕ್ಷಣಕ್ಕೆ ಯಾವತ್ತು ಅಡ್ಡಿಪಡಿಸಲಿಲ್ಲ. ನಾನು  ಶಿಕ್ಷಕ ನಾಗುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಕಲಿಬೇಕೆಂಬ ಛಲ ಇದ್ದರೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸತೀಶ್ ಪಿ. ದಂಪತಿಯನ್ನು ಸನ್ಮಾನಿಸಲಾಯಿತು.


ಉಪನ್ಯಾಸಕರುಗಳಾದ ಫಿಲೋಮಿನಾ ಲೋಬೊ, ಡಾ. ಶಿವಪ್ರಕಾಶ್, ಅಸುಂಡಿ, ದಿವಾಕರ್ ಶೆಟ್ಟಿ, ಚಂದ್ರಕಲಾ, ಆಶಾ, ಪ್ರಸನ್ನ, ಪ್ರಕಾಶ್ ಹಾಗೂ ಪುತ್ರ  ನಾಗಭೂಷಣ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು