6:29 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು?

20/06/2021, 08:59

ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ.

ಜಮೀರ್ ಖಾನ್ ಅವರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವುದು ಈ ಎಲ್ಲ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಈ ಕುರಿತು ಜಮೀರ್ ಅವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಆದರೆ ಜಮೀರ್ ಅವರು ಇದು ಯಾವುದಕ್ಕೂ ಕ್ಯಾರೇ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಮೀರ್
ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಶಿವಕುಮಾರ್ ಅವರು ದೂರು ನೀಡಲಿದ್ದಾರೆ ಎನ್ನಲಾಗಿದೆ.

ಜಮೀರ್ ಖಾನ್ ಅವರು ಹೋದ ಕಡೆಗಳೆಲ್ಲ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ, ಅವರನ್ನು 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುತ್ತೇನೆ ಎಂದು ಹೇಳಿಕೊಳ್ಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿರುವ ಬಗ್ಗೆ ಶಿವಕುಮಾರ್ ತಕರಾರು ಎತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪದೇ ಪದೇ ನಿಂದನಾತ್ಮಕ ಹೇಳಿಕೆ ನೀಡುವುದು, ಏಕ ವಚನ ಪ್ರಯೋಗ ಮಾಡುವುದರಿಂದ ರಾಜ್ಯದಲ್ಲಿ ಒಕ್ಕಲಿಗರ ಮತ ಪಡೆಯುವುದು ಕಷ್ಟ ಎನ್ನುವುದು ಕೆಪಿಸಿಸಿ ಅಧ್ಯಕ್ಷರ ವಾದವಾಗಿದೆ. ಜತೆಗೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವುದು ಸರಿಯಲ್ಲ, ನಮ್ಮದು ಸಾಮೂಹಿಕ ನಾಯಕತ್ವ ಎನ್ನುವುದು ಶಿವಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ. ಹಾಗಾಗಿ
ರಾಹುಲ್ ಗಾಂಧಿ ಹುಟ್ಟುಹಬ್ಬದ ನಿಮಿತ್ತ ಶುಭ ಕೋರಲು ದೆಹಲಿಗೆ ಹೋಗಿರುವ ಶಿವಕುಮಾರ್ ಅವರು ಜಮೀರ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು