9:56 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು?

20/06/2021, 08:59

ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ.

ಜಮೀರ್ ಖಾನ್ ಅವರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವುದು ಈ ಎಲ್ಲ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಈ ಕುರಿತು ಜಮೀರ್ ಅವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಆದರೆ ಜಮೀರ್ ಅವರು ಇದು ಯಾವುದಕ್ಕೂ ಕ್ಯಾರೇ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಮೀರ್
ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಶಿವಕುಮಾರ್ ಅವರು ದೂರು ನೀಡಲಿದ್ದಾರೆ ಎನ್ನಲಾಗಿದೆ.

ಜಮೀರ್ ಖಾನ್ ಅವರು ಹೋದ ಕಡೆಗಳೆಲ್ಲ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ, ಅವರನ್ನು 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುತ್ತೇನೆ ಎಂದು ಹೇಳಿಕೊಳ್ಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿರುವ ಬಗ್ಗೆ ಶಿವಕುಮಾರ್ ತಕರಾರು ಎತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪದೇ ಪದೇ ನಿಂದನಾತ್ಮಕ ಹೇಳಿಕೆ ನೀಡುವುದು, ಏಕ ವಚನ ಪ್ರಯೋಗ ಮಾಡುವುದರಿಂದ ರಾಜ್ಯದಲ್ಲಿ ಒಕ್ಕಲಿಗರ ಮತ ಪಡೆಯುವುದು ಕಷ್ಟ ಎನ್ನುವುದು ಕೆಪಿಸಿಸಿ ಅಧ್ಯಕ್ಷರ ವಾದವಾಗಿದೆ. ಜತೆಗೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವುದು ಸರಿಯಲ್ಲ, ನಮ್ಮದು ಸಾಮೂಹಿಕ ನಾಯಕತ್ವ ಎನ್ನುವುದು ಶಿವಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ. ಹಾಗಾಗಿ
ರಾಹುಲ್ ಗಾಂಧಿ ಹುಟ್ಟುಹಬ್ಬದ ನಿಮಿತ್ತ ಶುಭ ಕೋರಲು ದೆಹಲಿಗೆ ಹೋಗಿರುವ ಶಿವಕುಮಾರ್ ಅವರು ಜಮೀರ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು