9:33 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಅತ್ಯಾಚಾರ ಮಾಡಿ ಕೊಲೆ ಶಂಕೆ

04/07/2022, 08:45

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಿಂದ ಮತ್ತೊಂದು ಭಯಾನಕ ಸುದ್ದಿ ಹೊರಬಿದ್ದಿದೆ. ನಗರದ ಕೆಂಗೇರಿ ರಾಮಸಂದ್ರದಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬಳ ದೇಹ ಪತ್ತೆಯಾಗಿದೆ‌‌.

ಕೊಲೆಯಾದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ದೊರೆತಿಲ್ಲ.ಕೊಲೆ ಮಾಡಿ ನಂತರ ಬೆಂಕಿ ಹಚ್ಚಿರಬೇಕೆಂದು ಶಂಕಿಸಲಾಗಿದೆ. ಹತ್ಯೆಗೂ ಮೊದಲು ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ಸ್ಥಳೀಯರೊಬ್ಬರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಒಂದು ಮೃತದೇಹ ಸುಟ್ಟ ಸ್ಥಿತಿಯಲ್ಲಿ ರಾಮಸಂದ್ರ ನೈಸ್ ರಸ್ತೆ ಪಕ್ಕದಲ್ಲಿ ಬಿದ್ದಿದೆ ಅಂತಾ ಹೇಳಿದರು. ತಕ್ಷಣ ಸ್ಥಳಕ್ಕೆ ಬಂದ ಕೆಂಗೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ‌.

ಈ ವೇಳೆ ಅಲ್ಲಿ ಹೆಣವಾಗಿದ್ದು 25 ರಿಂದ 30 ವರ್ಷದ ಮಹಿಳೆ ಅನ್ನೋದು ಗೊತ್ತಾಗಿದೆ.24 ಗಂಟೆಗೂ ಮೊದಲು ಬೆಂಕಿ ಹಚ್ಚಿರೊ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.ಮೃತದೇಹ ಪತ್ತೆಯಾದ ಜಾಗದಲ್ಲಿ ಸಿಕ್ಕ ಮದ್ಯದ ಬಾಟಲಿಗಳು, ಚಪ್ಪಲಿಗಳನ್ನೆಲ್ಲ ವಶಕ್ಕೆ ಪಡೆದಿರುವ ಕೆಂಗೇರಿ ಪೊಲೀಸರು ತನಿಖೆ ನಡೆಸ್ತಿದ್ದಾರೆ .

ಇನ್ನೂ ಮೃತದೇಹ ಸಿಕ್ಕ 50 ಮೀಟರ್ ದೂರದಲ್ಲಿ ಒಂದು ನಿರ್ಮಾಣ ಹಂತದ ಪಾಳು ಕಟ್ಟಡ ಇದ್ದು,ಅಲ್ಲಿಯೂ ಸುಟ್ಟ ಕುರುಹುಗಳು ಇದ್ದು ಇಲ್ಲಿ ಬೆಂಕಿ ಹಚ್ಚಿ ನಂತರ ಮರದ ಕೆಳಗೆ ಸುಟ್ಟಾಕಿರೊ ಅನುಮಾನ ಇದೆ. ಅಷ್ಟೇ ಅಲ್ಲ ಬೇರೆ ಕಡೆ ಕೊಲೆ ಮಾಡಿ ಇಲ್ಲಿ ತಂದು ನಿರ್ಜನ ಪ್ರದೇಶದಲ್ಲಿ ಬಿಸಾಡಿಹೋಗಿರುವ ಅನುಮಾನ ಕೂಡ ಇದೆ.ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು