3:24 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಕುರಿತು ರಾಜಣ್ಣ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸಲಿ: ಹೊರಟ್ಟಿ

04/07/2022, 08:54

ಬೆಂಗಳೂರು(reporterkarnataka.com): ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ ಎಚ್.ಡಿ.ದೇವೇಗೌಡರ ವಯಸ್ಸು ಹಾಗೂ ಶಕ್ತಿಯ ಕುರಿತು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಅಪಹಾಸ್ಯದ ಮಾತುಗಳು ಸಲ್ಲ, ಕೂಡಲೇ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೆಚ್.ಡಿ.ದೇವೇಗೌಡರು ಪ್ರಧಾನಿ ಹುದ್ದೆಗೆ ಏರಿದ ಏಕೈಕ ಕನ್ನಡಿಗರಾಗಿದ್ದಾರೆ. ಸುದೀರ್ಘ ಕಾಲದ ಅವರ ರಾಜಕೀಯ ಅನುಭವವನ್ನು ನಾಡು ಪಕ್ಷಾತೀತವಾಗಿ ಗೌರವಿಸಬೇಕು. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಹಿರಿಯರ ಕುರಿತು ಹೇಳಿಕೆ ನೀಡುವಾಗ ವೈಯಕ್ತಿಕ ಅಪಹಾಸ್ಯ, ಅಪನಿಂದೆಗಳಿಗೆ ಅವಕಾಶ ಕಲ್ಪಿಸಬಾರದು. ರಾಜಕಾರಣಿಗಳ ನಡೆಗಳು ನೈತಿಕತೆಯ ಎಲ್ಲೆ ಮೀರಬಾರದು. ಪ್ರತಿಯೊಂದು ಮಾತು, ಹೇಳಿಕೆಗಳು ಸಮಾಜದ ಮೇಲೆ ಪರಿಣಾಮ ಬೀರುತ್ತವೆ ಎಂಬುದರ ಅರಿವು ಸದಾ ಕಾಲ ಜಾಗೃತವಾಗಿರಬೇಕು. ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಎಚ್.ಡಿ.ದೇವೇಗೌಡರನ್ನು ಖುದ್ದಾಗಿ ಭೇಟಿಯಾಗಿ ಬಹಿರಂಗ ಕ್ಷಮೆಯಾಚಿಸಬೇಕು ಇಂತಹ ತಪ್ಪುಗಳಿಗೆ ಪ್ರಾಯಶ್ಚಿತ್ತ ಅನುಭವಿಸಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು