4:55 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬಂಟ್ವಾಳದ ಅಮ್ಮೆಮಾರು ಸಮೀಪದ ಗುಡ್ಡ ಕುಸಿತ: ಮನೆಗೆ ತೀವ್ರ ಹಾನಿ, ಬಿರುಕು ಬಿಟ್ಟ ಗೋಡೆ; ಆತಂಕ ಹೆಚ್ಚಿಸಿದ ಮಳೆ

04/07/2022, 10:10

ಸಾಂದರ್ಭಿಕ ಚಿತ್ರ
ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಮನೆಯೊಂದು ಅಪಾಯಕ್ಕೆ ಸಿಲುಕಿದೆ.

ಅಮ್ಮೆಮಾರು ಸಮೀಪದ ಪದೆಂಜಾರ್ ಎಂಬಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ನಾರಾಯಣ ಮುಕಾರಿ ಎಂಬವರ ಮನೆ ಅಪಾಯಕ್ಕೆ ಸಿಲುಕಿದೆ. ಮನೆಯ ಹಿಂಭಾಗದ ಒಂದು ಪಾರ್ಶ್ವದ ಮಣ್ಣು ಸಂಪೂರ್ಣ ಕುಸಿದು ಮನೆ ಅಪಾಯಕ್ಕೆ ಸಿಲುಕಿದೆ. ಭೂ ಕುಸಿತಕ್ಕೆ ಹಿಂಭಾಗದ ಕಲ್ಲುಗಳು ಕೆಲಭಾಗದಲ್ಲಿ ಹರಿಯುತ್ತಿರುವ ತೊರೆ ಪಾಲಾಗಿದೆ. ಗೋಡೆಗಳು ಬಿರುಕು ಬಿಟ್ಟಿದ್ದು ಇದೇ ರೀತಿ ಮಳೆ ಸುರಿದರೆ ಇಡೀ ಮನೆಯೇ ಧರಶಾಹಿಯಾಗುವ ಆತಂಕ ಎದುರಾಗಿದೆ.

ಮುಕಾರಿ ಅವರದ್ದು ಅವಿಭಕ್ತ ಕುಟುಂಬವಾಗಿದ್ದು, ಮಕ್ಕಳು ಹಿರಿಯರು ಸೇರಿ 15 ಮಂದಿ ಮನೆಯಲ್ಲಿ ವಾಸವಾಗಿದ್ದಾರೆ.

ನಿರಂತರ ಮಳೆಯಿಂದಾಗಿ ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಾಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು