3:12 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸುಳ್ಯ: ಬಿರುಕು ಬಿಟ್ಟ ಗುಳಿಕ್ಕಾನ ಜನವಸತಿ ಪ್ರದೇಶಕ್ಕೆ ತಜ್ಞರ ತಂಡ ಭೇಟಿ; ಪರಿಶೀಲನೆ

05/07/2022, 08:59

ಸಾಂದರ್ಭಿಕ ಚಿತ್ರ
ಸುಳ್ಯ(reporterkarnataka.com):
ಬಿರುಕು ಬಿಟ್ಟು ಜನರ ಆತಂಕಕ್ಕೆ ಕಾರಣವಾದ ಸುಳ್ಯದ ಗುಳಿಕ್ಕಾನ ಪ್ರದೇಶಕ್ಕೆ ತಜ್ಞರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

2018 ರಲ್ಲಿ ಗುಳಿಕ್ಕಾನದ ಗುಡ್ಡದಲ್ಲಿ 200 ಮೀಟರ್ ದೂರದವರೆಗೆ ಭೂಮಿ ಆಳವಾಗಿ ಭಾಗ ಬಿಟ್ಟಿತು. ಈ ವೇಳೆ ಗುಳಿಕ್ಕಾನದ ಗುಡ್ಡ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು.

ಇದೀಗ ಈ ಗುಡ್ಡ ಪ್ರದೇಶದಲ್ಲಿ ಜನ ವಾಸ ಮಾಡಲು ಸೂಕ್ತವಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕೆ ತಂಡ ಆಗಮಿಸಿದೆ.

ಸುಳ್ಯದ ಗುಳಿಕ್ಕಾನ ಪ್ರದೇಶ ಜನ ವಾಸಿಸಲು ಯೊಗ್ಯವಾಗಿದೆಯೇ ಎಂದು ತಿಳಿಯಲು ಅಧ್ಯಯನ ತಂಡ ಆಗಮಿಸಿ ಪರಿಶೀಲನೆ ನಡೆಸಿ  ಅಧ್ಯಯನ ವರದಿ ಸರ್ಕಾರಕ್ಕೆ ಸಲ್ಲಿಸಲಿದೆ.

ಜಿಯಾಲಾಜಿಕಲ್ ಸರ್ವಿಸ್ ಆಫ್ ಇಂಡಿಯಾ ಮಿನಿಸ್ಟರಿ ಮೈನ್ಸ್ ಆಫ್ ಇಂಡಿಯಾದ ಹಿರಿಯ ಜಿಯಾಲಾಜಿಸ್ಟ್ ಅಫೀಸರ್ ಐಜಾದ್ ಅಹಮದ್ ಭಟ್, ಹಿರಿಯ ಜಿಯಾಲಾಜಿಸ್ಟ್ ಜಿ ಎಸ್ ಐ ಸೆಂಥಿಲ್ ಕುಮಾರ್ ಸುಕೋಚ್,  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಂಗಳೂರು ಉಪ ನಿರ್ದೇಶಕ ಲಿಂಗರಾಜ್ ಬಿ ಎಂ ಹಾಗೂ ಭೂ ವಿಜ್ಞಾನಿ ಶ್ರೀಮತಿ ಡಾ. ಸುಷ್ಮಾಶಶಿ ಇದ್ದರು. ಉಪ ತಹಶಿಲ್ದಾರ್ ಚಂದ್ರಕಾಂತ್ ಎಂ ಆರ್, ಆರ್ ಐ ಶಂಕರ್, ಕೊಲ್ಲಮೊಗ್ರು ಗ್ರಾ.ಪಂ ಪಿಡಿಒ ರವಿಚಂದ್ರ, ಕೊಲ್ಲಮೊಗ್ರು ಗ್ರಾಮ ಲೆಕ್ಕಾಧಿಕಾರಿ ಮಧು ಕೆ ಬಿ, ಸಹಾಯಕ ಯತಿನ್, ಗ್ರಾ.ಪಂ ಸಿಬ್ಬಂದಿ ಸಂತೋಷ್, ಸ್ಥಳೀಯ ಜನ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಗುಡ್ಡ ಬಿರುಕು ಬಿಟ್ಟ ಹೊರತಾಗಿಯೂ ಅಲ್ಲಿ ಈಗಲೂ ಜನರು ವಾಸವಾಗಿದ್ದಾರೆ. ಸ್ಥಳಾಂತರಿಸಲು ಪ್ರಕ್ರಿಯೆ ಆರಂಭವಾಗಿ ನಾಲ್ಕು ವರ್ಷಗಳಾದರೂ ಈ ವರೆಗೆ ಸಾಧ್ಯವಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು