2:38 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪ್ರಧಾನಿ ಭದ್ರತೆಯಲ್ಲಿ ಮತ್ತೆ ಲೋಪ: ಹೆಲಿಕಾಪ್ಟರ್ ಬಳಿ ಹಾರಿ ಬಂದ ಪ್ರತಿಭಟನಾಕಾರರ ಬಲೂನ್

05/07/2022, 09:05

ವಿಜಯವಾಡ(reporterkarnataka.com):ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿದೆ.

ಈ ಹಿಂದೆ ಪಂಜಾಬ್‌ನಲ್ಲಿ ಭದ್ರತಾ ಲೋಪದ ಬಳಿಕ ಇದೀಗ ಮತ್ತೆ ಆಂಧ್ರಪ್ರದೇಶದಲ್ಲಿ ಇದೇ ರೀತಿ ಘಟನೆ ನಡೆದಿದ್ದು, ಪ್ರಧಾನಿ ಮೋದಿಯ ಹೆಲಿಕಾಪ್ಟರ್ ಸನಿಹದಲ್ಲಿ ಪ್ರತಿಭಟನಕಾರರ ಬಲೂನ್ ಹಾರಿ ಬಂದಿದೆ. 

ಪ್ರಧಾನಿ ಹೆಲಿಕಾಪ್ಟರ್ ಬಳಿ ಬಲೂನ್ ಹಾರಿ ಬಂದಿರುವುದರಿಂದ ಸ್ವಲ್ಪ ಹೊತ್ತು ಆತಂಕದ ವಾತವಾರಣ ನಿರ್ಮಾಣವಾಗಿತ್ತು.

ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಹಾಗೂ ಮೋದಿ ಹೆಲಿಕಾಪ್ಟರ್ ಮೂಲಕ ತೆರಳು ಮಾರ್ಗದಲ್ಲಿ ಪ್ರತಿಭಟನೆ ವೇಳೆ ಬಲೂನ್ ಹಾರಿಬಿಟ್ಟ ಭದ್ರತಾ ಲೋಪವೆಸಗಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಈ ಬಲೂನ್‌‌ಗಳನ್ನು ಹಾರಿ ಬಿಡಲಾಗಿದೆ. ಹಾರಿಬಿಟ್ಟ ದೊಡ್ಡ ಗಾತ್ರದ ಬಲೂನ್‌ಗಳು ಆಗಸದಲ್ಲಿ ತೇಲಾಡಿದೆ. ಇತ್ತ ಕಾರ್ಯಕ್ರಮದ ಮುಗಿಸಿ ಮೋದಿ ಹೆಲಿಕಾಪ್ಟರ್ ಏರಿ ಪ್ರಯಾಣ ಆರಂಭಿಸಿದರು. ಹೆಲಿಕಾಪ್ಟರ್ ಟೇಕ್ ಆಫ್ ಆಗಿ ಮೇಲಕ್ಕೆ ಹಾರುತ್ತಿದ್ದಂತೆ ಪ್ರತಿಭಟನಾಕಾರರ ಬಲೂನ್ ಅಡ್ಡಬಂದಿದೆ. ಆದರೆ ಪೈಲೈಟ್ ಸಮಯಪ್ರಜ್ಞೆಯಿಂದ ಬಹುದೊಡ್ಡ ಅಪಾಯ ತಪ್ಪಿದೆ.

ಇದು ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ನಡೆದ ಎರಡನೇ ಲೋಪವಾಗಿದೆ.

ಪಂಜಾಬ್ ಭೇಟಿಯಲ್ಲಿ ನಡೆದಿತ್ತು ಭದ್ರತಾ ಲೋಪ ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಈ ಹಿಂದೆ ನಡೆದಿತ್ತು. . ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು