7:53 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

05/07/2022, 15:26

ಹುಬ್ಬಳ್ಳಿ (Reporterkarnataka.com)
ಹಾಡಹಗಲೇ ನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ್ರಾಮವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳವಾರ ಬೆಳಗ್ಗೆ ಪ್ರಸಿಡೆಂಟ್​ ಹೋಟೆಲ್​ನ ರಿಸೆಪ್ಶನ್​ನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಕುಳಿತಿದ್ದರು. ಚಂದ್ರಶೇಖರ ಗುರೂಜಿ ಅವರು ಆಗಮಿಸುತ್ತಿದ್ದಂತೆ ಎದ್ದು ಯುವಕರಿಬ್ಬರು ನಿಂತರು. ಗುರೂಜಿ ಅವರು ಖುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಇಬ್ಬರೂ ಸಮೀಪಕ್ಕೆ ಆಗಮಿಸಿದ್ದಾರೆ. ಒಬ್ಬ ಗುರೂಜಿ ಅವರ ಕಾಲು ಮುಟ್ಟಿ ನಮಸ್ಕರಿಸಿ ಮೇಲಕ್ಕೆ ಏಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಮತ್ತೊಬ್ಬ ಗುರೂಜಿಗೆ ಚಾಕುವಿನಿಂದ ಇರಿದಿದ್ದಾನೆ. ಏನಾಗ್ತಿದೆ ಎಂದು ಅರಿಯುವಷ್ಟರಲ್ಲಿ ಇಬ್ಬರೂ ಗುರೂಜಿಯನ್ನ ರಿಸೆಪ್ಶನ್​ನಲ್ಲೇ ಅಟ್ಟಾಡಿಸಿಕೊಂಡು 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಬಳಿಕ ಚಾಕು ಹಿಡಿದುಕೊಂಡೇ ಹೋಟೆಲ್​ನಿಂದ ಹೊರ ಓಡಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಕೆಲವರು ಭಯದಿಂದ ದೂರ ಓಡಿದ್ದಾರೆ.

ಹೋಟೆಲ್‌ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಿಡಿಸಿಕೊಳ್ಳಲು ಬಂದರೂ ಅವರಿಗೂ ಬೆದರಿಸಿದ ಹಂತಕರು, ಸ್ಥಳದಲ್ಲೇ ಮೃತಪಡುವವರೆಗೂ ಗುರೂಜಿಗೆ ಚುಚ್ಚಿ ಚುಚ್ಚಿ ಕೊಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದ ಚಂದ್ರಶೇಖರ ಗುರೂಜಿ ಅವರು ಹುಬ್ಬಳ್ಳಿಯ ಉಣಕಲ್​ನ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಗುರೂಜಿ ಅವರನ್ನ ಭೇಟಿಯಾಗಲು ಬಂದಿದ್ದರು. ಅವರೇ ಗುರೂಜಿಯನ್ನ ಕೊಂದಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನವೊಂದು ಹಂತಕರ ಜಾಡು ಹಿಡಿದು ಹೊರಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು