1:39 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

05/07/2022, 15:26

ಹುಬ್ಬಳ್ಳಿ (Reporterkarnataka.com)
ಹಾಡಹಗಲೇ ನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ್ರಾಮವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳವಾರ ಬೆಳಗ್ಗೆ ಪ್ರಸಿಡೆಂಟ್​ ಹೋಟೆಲ್​ನ ರಿಸೆಪ್ಶನ್​ನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಕುಳಿತಿದ್ದರು. ಚಂದ್ರಶೇಖರ ಗುರೂಜಿ ಅವರು ಆಗಮಿಸುತ್ತಿದ್ದಂತೆ ಎದ್ದು ಯುವಕರಿಬ್ಬರು ನಿಂತರು. ಗುರೂಜಿ ಅವರು ಖುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಇಬ್ಬರೂ ಸಮೀಪಕ್ಕೆ ಆಗಮಿಸಿದ್ದಾರೆ. ಒಬ್ಬ ಗುರೂಜಿ ಅವರ ಕಾಲು ಮುಟ್ಟಿ ನಮಸ್ಕರಿಸಿ ಮೇಲಕ್ಕೆ ಏಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಮತ್ತೊಬ್ಬ ಗುರೂಜಿಗೆ ಚಾಕುವಿನಿಂದ ಇರಿದಿದ್ದಾನೆ. ಏನಾಗ್ತಿದೆ ಎಂದು ಅರಿಯುವಷ್ಟರಲ್ಲಿ ಇಬ್ಬರೂ ಗುರೂಜಿಯನ್ನ ರಿಸೆಪ್ಶನ್​ನಲ್ಲೇ ಅಟ್ಟಾಡಿಸಿಕೊಂಡು 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಬಳಿಕ ಚಾಕು ಹಿಡಿದುಕೊಂಡೇ ಹೋಟೆಲ್​ನಿಂದ ಹೊರ ಓಡಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಕೆಲವರು ಭಯದಿಂದ ದೂರ ಓಡಿದ್ದಾರೆ.

ಹೋಟೆಲ್‌ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಿಡಿಸಿಕೊಳ್ಳಲು ಬಂದರೂ ಅವರಿಗೂ ಬೆದರಿಸಿದ ಹಂತಕರು, ಸ್ಥಳದಲ್ಲೇ ಮೃತಪಡುವವರೆಗೂ ಗುರೂಜಿಗೆ ಚುಚ್ಚಿ ಚುಚ್ಚಿ ಕೊಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದ ಚಂದ್ರಶೇಖರ ಗುರೂಜಿ ಅವರು ಹುಬ್ಬಳ್ಳಿಯ ಉಣಕಲ್​ನ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಗುರೂಜಿ ಅವರನ್ನ ಭೇಟಿಯಾಗಲು ಬಂದಿದ್ದರು. ಅವರೇ ಗುರೂಜಿಯನ್ನ ಕೊಂದಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನವೊಂದು ಹಂತಕರ ಜಾಡು ಹಿಡಿದು ಹೊರಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು