1:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕೊಲ್ಕತ್ತಾ : ಹಸೆ ಮಣೆಗೇರಿದ ಸಲಿಂಗಕಾಮಿ ಜೋಡಿ

05/07/2022, 15:43

ಕೊಲ್ಕತ್ತಾ (Reporterkarnataka.com)
ಸಲಿಂಗಕಾಮಿ ಜೋಡಿ ವಿವಾಹವಾಗಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ ಪ್ರಸಂಗ ಕೊಲ್ಕತ್ತಾದಲ್ಲಿ ನಡೆದಿದೆ.

ವಿವಾಹ ಸಮಾರಂಭದಲ್ಲಿ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು. ಅಭಿಷೇಕ್​ ರೇ ಮತ್ತು ಚೈತನ್ಯ ಶರ್ಮಾ ವಿವಾಹವಾದವರು.

ದಂಪತಿ ಅರಿಷಿಣ ಶಾಸ್ತ್ರ ಮತ್ತು ವಿವಾಹ ಸಮಾರಂಭಗಳ ಚಿತ್ರಗಳು ಮತ್ತು ವಿಡಿಯೊಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಅಭಿಷೇಕ್​ ಧೋತಿ ಮತ್ತು ಕುರ್ತಾದಲ್ಲಿ ಸಾಂಪ್ರದಾಯಿಕ ಬಂಗಾಳಿ ವರನಂತೆ ಕಾಣಿಸಿಕೊಂಡರೆ, ಚೈತನ್ಯ ಶೆರ್ವಾನಿ ಧರಿಸಿದ್ದರು. ಸಮಾರಂಭದಲ್ಲಿ ಖುಷಿ, ಸಂಭ್ರಮ ಎದ್ದು ಕಾಣಿಸಿದೆ. ಕುಟುಂಬಸ್ಥರು, ಸ್ನೇಹಿತರು ಸಡಗರದಲ್ಲಿರುವುದೂ ಸಹ ಫೋಟೋದಲ್ಲಿ ಕಾಣಿಸಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ, ಸಲಿಂಗಕಾಮಿ ದಂಪತಿ ಹೈದರಾಬಾದ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್​ ದಂಗ್​ ಹೈದ್ರಾಬಾದ್​ನ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು