3:09 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೆರಿಗೆ ವಂಚನೆ, ದೇಶದ ಗೌಪ್ಯ ಮಾಹಿತಿ ಸೋರಿಕೆ: ಚೀನಾದ ಕಂಪನಿಗಳ ಮೇಲೆ ಇಡಿ ದಾಳಿ

06/07/2022, 12:11

ಹೊಸದಿಲ್ಲಿ(reporterkarnataka.com): ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೇಶದಲ್ಲಿನ ಚೀನಾದ ಟೆಲಿಕಾಂ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬೆನ್ನೆಲ್ಲೇ ಇದೀಗ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ತೆರಿಗೆ ವಂಚನೆ ಮತ್ತು ದೇಶದ ಗೌಪ್ಯ ವಿಚಾರಗಳನ್ನು ಸೋರಿಕೆ ಮಾಡುತ್ತಿರುವ ಆರೋಪದ ಮೇಲೆ ಚೀನಾಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶ, ಮಧ್ಯಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿನ ಚೀನಾ ಕಂಪನಿಗಳ ಮೇಲೆ ರೈಡ್​ ನಡೆಸಿ ಪರಿಶೀಲನೆಗೆ ಒಳಪಡಿಸಲಾಗಿದೆ.

ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿರುವ ಚೀನಾ ಮೂಲದ ಟೆಲಿಕಾಂ ಕಂಪನಿಗಳ ಆದಾಯ ವಿವರ ಸಲ್ಲಿಕೆಯಲ್ಲಿ ಲೋಪದೋಷಗಳು ಕಂಡು ಬಂದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಬಿಸಿ ಮುಟ್ಟಿಸಿದೆ.

ಕಳೆದ ಕೆಲ ವರ್ಷಗಳಿಂದ ಚೀನಿ ಮೂಲದ ಮೊಬೈಲ್​ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದರೂ, ನಷ್ಟವನ್ನು ತೋರಿಸುತ್ತಿವೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದಾಯ ತೆರಿಗೆಯಿಂದ ನುಣುಚಿಕೊಳ್ಳಲು ಕಂಪನಿಗಳ ಈ ರೀತಿ ಮೋಸ ಮಾಡುತ್ತಿವೆ ಎಂಬ ಅನುಮಾನದ ಮೇಲೆ ತನಿಖೆಗೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು