9:33 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಿರಂತರ ಮಳೆಗೆ ಕುಸಿದ ಗುಡ್ಡ, ರಸ್ತೆ ಅಡಿಯಿಂದ ಜಾರಿದ ಮಣ್ಣು ; ಅದ್ಯಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಬಂದ್ !!

06/07/2022, 12:39

ಚಿತ್ರ: ಗಣೇಶ್ ಅದ್ಯಪಾಡಿ ಮಂಗಳೂರು

ಬಜಪೆ (Reporterkarnataka.com)
ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಪದವಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳು ಮಳೆಯ ಕಾರಣದಿಂದಾಗಿ ಮುಚ್ಚಿ ಹೋಗಿದ್ದು ಊರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿಯೂ ಸಂಚಾರವಿರದೆ ಹೊರಗಡೆಯಿಂದ ಸಂಪರ್ಕ ಕಳೆದುಕೊಳ್ಳುವ ಭೀತಿಯಿಂದ ಜನರು ಇದ್ದಾರೆ.


ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅದ್ಯಪಾಡಿ ಪದವಿನಿಂದ ಬಜಪೆಗೆ ಹೋಗುವಂತಹ ರಸ್ತೆಯಲ್ಲಿ ಗುಡ್ಡೆ ಬಿರಿದು ಪೂರ್ಣ ರಸ್ತೆಯ ಮೇಲೆ ಮಣ್ಣಿನ ರಾಶಿ ಆವರಿಸಿಕೊಂಡಿರುವುದರಿಂದ ಯಾವುದೇ ವಾಹನಗಳ ಸಂಚಾರ ಸಾಧ್ಯವಾಗುತ್ತಿಲ್ಲ.
ಅದೇ ರೀತಿ ಅದ್ಯಪಾಡಿ ಶಾಲೆಯಿಂದ ಕೆಂಜಾರು ಕಡೆ ಹೋಗುವ ರಸ್ತೆಯಲ್ಲಿ ಕಾಂಕ್ರೀಟ್ ಕೆಳಭಾಗದಿಂದ ಮಣ್ಣು ಕುಸಿದು ಹೋಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರಸ್ತೆಯ ಕೆಳಭಾಗದಿಂದ ಮಣ್ಣು ಸರಿದು ಹೋಗಲು ರಭಸವಾಗಿ ಹರಿದ ನೀರು ಕಾರಣವಾಗಿದ್ದು, ಹಲವು ಮಂದಿ ಏರ್ಪೋರ್ಟ್ ಮೇಲೆ ಕೂಡ ಆರೋಪವನ್ನು ಹೊರಿಸುತ್ತಿದ್ದಾರೆ.


ಸ್ಥಳಕ್ಕೆ ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿಯನ್ನು ನೀಡಿದ್ದಾರೆ. ಒಟ್ಟಿನಲ್ಲಿ ಅದ್ಯಪಾಡಿಯ ಜನತೆಗೀಗ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳನ್ನು ಉಪಯೋಗಿಸಲಾಗದೆ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಆಡಳಿತ ವ್ಯವಸ್ಥೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತ್ವರಿತ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು