8:54 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಿರಂತರ ಮಳೆಗೆ ಕುಸಿದ ಗುಡ್ಡ, ರಸ್ತೆ ಅಡಿಯಿಂದ ಜಾರಿದ ಮಣ್ಣು ; ಅದ್ಯಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಬಂದ್ !!

06/07/2022, 12:39

ಚಿತ್ರ: ಗಣೇಶ್ ಅದ್ಯಪಾಡಿ ಮಂಗಳೂರು

ಬಜಪೆ (Reporterkarnataka.com)
ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಪದವಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳು ಮಳೆಯ ಕಾರಣದಿಂದಾಗಿ ಮುಚ್ಚಿ ಹೋಗಿದ್ದು ಊರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿಯೂ ಸಂಚಾರವಿರದೆ ಹೊರಗಡೆಯಿಂದ ಸಂಪರ್ಕ ಕಳೆದುಕೊಳ್ಳುವ ಭೀತಿಯಿಂದ ಜನರು ಇದ್ದಾರೆ.


ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅದ್ಯಪಾಡಿ ಪದವಿನಿಂದ ಬಜಪೆಗೆ ಹೋಗುವಂತಹ ರಸ್ತೆಯಲ್ಲಿ ಗುಡ್ಡೆ ಬಿರಿದು ಪೂರ್ಣ ರಸ್ತೆಯ ಮೇಲೆ ಮಣ್ಣಿನ ರಾಶಿ ಆವರಿಸಿಕೊಂಡಿರುವುದರಿಂದ ಯಾವುದೇ ವಾಹನಗಳ ಸಂಚಾರ ಸಾಧ್ಯವಾಗುತ್ತಿಲ್ಲ.
ಅದೇ ರೀತಿ ಅದ್ಯಪಾಡಿ ಶಾಲೆಯಿಂದ ಕೆಂಜಾರು ಕಡೆ ಹೋಗುವ ರಸ್ತೆಯಲ್ಲಿ ಕಾಂಕ್ರೀಟ್ ಕೆಳಭಾಗದಿಂದ ಮಣ್ಣು ಕುಸಿದು ಹೋಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರಸ್ತೆಯ ಕೆಳಭಾಗದಿಂದ ಮಣ್ಣು ಸರಿದು ಹೋಗಲು ರಭಸವಾಗಿ ಹರಿದ ನೀರು ಕಾರಣವಾಗಿದ್ದು, ಹಲವು ಮಂದಿ ಏರ್ಪೋರ್ಟ್ ಮೇಲೆ ಕೂಡ ಆರೋಪವನ್ನು ಹೊರಿಸುತ್ತಿದ್ದಾರೆ.


ಸ್ಥಳಕ್ಕೆ ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿಯನ್ನು ನೀಡಿದ್ದಾರೆ. ಒಟ್ಟಿನಲ್ಲಿ ಅದ್ಯಪಾಡಿಯ ಜನತೆಗೀಗ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳನ್ನು ಉಪಯೋಗಿಸಲಾಗದೆ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಆಡಳಿತ ವ್ಯವಸ್ಥೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತ್ವರಿತ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು