9:13 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ಕ್ರಿಮಿನಲ್ ಗಳ ಪರೇಡ್ : ‘ಯಾಕಪ್ಪ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ದೀಯಾ’ ಅಂತ ಪ್ರಶ್ನಿಸಿದ ಪೊಲೀಸ್ ಕಮಿಷನರ್

06/07/2022, 19:25

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿರುವ ಕ್ರಿಮಿನಲ್‌ಗಳ ಪರೇಡ್‌ ಇಂದು ನಗರದ ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ನಡೆಯಿತು. 


275 ಕ್ರಿಮಿನಲ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದರು.ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್‌ ಪ್ರಕರಣದ ಆರೋಪಿ ಕಿಶೋರ್‌ ಅಮನ್‌ ಕಂಡು ಪೊಲೀಸ್‌ ಕಮೀಷನರ್‌ ಎನ್‌. ಶಶಿಕುಮಾರ್‌ ಶರ್ಟ್ ಬಿಚ್ಚಿಸಿ ಆತನ ಕತ್ತಿನಲ್ಲಿದ್ದ ಹಾರ ಮತ್ತು ಎದೆಯ ಮೇಲಿದ್ದ ಟ್ಯಾಟೂ ನೊಡಿ ‘ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ’ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಕಿಶೋರ್ ಶೆಟ್ಟಿ, ತಾಯಿಯ ಟ್ಯಾಟೂ ಹಾಕಿರುವೆ ಎಂದಾಗ ‘ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ‌. ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಹೇಳಿದ ಅವರು ನೀನು ಡ್ರಗ್ಸ್‌ ತಿಂತೀಯಾ ಅಥವಾ ಬೇರೆಯವರಿಗೆ ತಿನ್ನಿಸೋದಷ್ಟೇನಾ ಎಂದು ಕ್ಲಾಸ್‌ ತೆಗೆದುಕೊಂಡರು. ಜೊತೆಗೆ ಕಳ್ಳತನ  ಪ್ರಕರಣದ ಆರೋಪಿಗಳ ಬಳಿ ಐಫೋನ್‌ಗಳನ್ನು ಕಂಡು ಹಾಗೂ ಗೋಕಳ್ಳತನ ಆರೋಪಿಗಳ ಪರ್ಸ್‌ನಲ್ಲಿದ್ದ ಸಾವಿರಾರು ರೂಪಾಯಿ ನೋಟು ನೋಡಿ ದಂಗಾದರು.

ಇತ್ತೀಚಿನ ಸುದ್ದಿ

ಜಾಹೀರಾತು