3:20 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ಕ್ರಿಮಿನಲ್ ಗಳ ಪರೇಡ್ : ‘ಯಾಕಪ್ಪ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ದೀಯಾ’ ಅಂತ ಪ್ರಶ್ನಿಸಿದ ಪೊಲೀಸ್ ಕಮಿಷನರ್

06/07/2022, 19:25

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿರುವ ಕ್ರಿಮಿನಲ್‌ಗಳ ಪರೇಡ್‌ ಇಂದು ನಗರದ ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ನಡೆಯಿತು. 


275 ಕ್ರಿಮಿನಲ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದರು.ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್‌ ಪ್ರಕರಣದ ಆರೋಪಿ ಕಿಶೋರ್‌ ಅಮನ್‌ ಕಂಡು ಪೊಲೀಸ್‌ ಕಮೀಷನರ್‌ ಎನ್‌. ಶಶಿಕುಮಾರ್‌ ಶರ್ಟ್ ಬಿಚ್ಚಿಸಿ ಆತನ ಕತ್ತಿನಲ್ಲಿದ್ದ ಹಾರ ಮತ್ತು ಎದೆಯ ಮೇಲಿದ್ದ ಟ್ಯಾಟೂ ನೊಡಿ ‘ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ’ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಕಿಶೋರ್ ಶೆಟ್ಟಿ, ತಾಯಿಯ ಟ್ಯಾಟೂ ಹಾಕಿರುವೆ ಎಂದಾಗ ‘ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ‌. ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಹೇಳಿದ ಅವರು ನೀನು ಡ್ರಗ್ಸ್‌ ತಿಂತೀಯಾ ಅಥವಾ ಬೇರೆಯವರಿಗೆ ತಿನ್ನಿಸೋದಷ್ಟೇನಾ ಎಂದು ಕ್ಲಾಸ್‌ ತೆಗೆದುಕೊಂಡರು. ಜೊತೆಗೆ ಕಳ್ಳತನ  ಪ್ರಕರಣದ ಆರೋಪಿಗಳ ಬಳಿ ಐಫೋನ್‌ಗಳನ್ನು ಕಂಡು ಹಾಗೂ ಗೋಕಳ್ಳತನ ಆರೋಪಿಗಳ ಪರ್ಸ್‌ನಲ್ಲಿದ್ದ ಸಾವಿರಾರು ರೂಪಾಯಿ ನೋಟು ನೋಡಿ ದಂಗಾದರು.

ಇತ್ತೀಚಿನ ಸುದ್ದಿ

ಜಾಹೀರಾತು