2:50 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ಕ್ರಿಮಿನಲ್ ಗಳ ಪರೇಡ್ : ‘ಯಾಕಪ್ಪ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ದೀಯಾ’ ಅಂತ ಪ್ರಶ್ನಿಸಿದ ಪೊಲೀಸ್ ಕಮಿಷನರ್

06/07/2022, 19:25

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿರುವ ಕ್ರಿಮಿನಲ್‌ಗಳ ಪರೇಡ್‌ ಇಂದು ನಗರದ ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ನಡೆಯಿತು. 


275 ಕ್ರಿಮಿನಲ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದರು.ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್‌ ಪ್ರಕರಣದ ಆರೋಪಿ ಕಿಶೋರ್‌ ಅಮನ್‌ ಕಂಡು ಪೊಲೀಸ್‌ ಕಮೀಷನರ್‌ ಎನ್‌. ಶಶಿಕುಮಾರ್‌ ಶರ್ಟ್ ಬಿಚ್ಚಿಸಿ ಆತನ ಕತ್ತಿನಲ್ಲಿದ್ದ ಹಾರ ಮತ್ತು ಎದೆಯ ಮೇಲಿದ್ದ ಟ್ಯಾಟೂ ನೊಡಿ ‘ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ’ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಕಿಶೋರ್ ಶೆಟ್ಟಿ, ತಾಯಿಯ ಟ್ಯಾಟೂ ಹಾಕಿರುವೆ ಎಂದಾಗ ‘ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ‌. ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಹೇಳಿದ ಅವರು ನೀನು ಡ್ರಗ್ಸ್‌ ತಿಂತೀಯಾ ಅಥವಾ ಬೇರೆಯವರಿಗೆ ತಿನ್ನಿಸೋದಷ್ಟೇನಾ ಎಂದು ಕ್ಲಾಸ್‌ ತೆಗೆದುಕೊಂಡರು. ಜೊತೆಗೆ ಕಳ್ಳತನ  ಪ್ರಕರಣದ ಆರೋಪಿಗಳ ಬಳಿ ಐಫೋನ್‌ಗಳನ್ನು ಕಂಡು ಹಾಗೂ ಗೋಕಳ್ಳತನ ಆರೋಪಿಗಳ ಪರ್ಸ್‌ನಲ್ಲಿದ್ದ ಸಾವಿರಾರು ರೂಪಾಯಿ ನೋಟು ನೋಡಿ ದಂಗಾದರು.

ಇತ್ತೀಚಿನ ಸುದ್ದಿ

ಜಾಹೀರಾತು