2:46 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ  ರೈ ಆರೋಪ

07/07/2022, 16:45

ಬಂಟ್ವಾಳ(reporterkarnataka.com):  ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬಿ.ಸಿ.ರೋಡ್‌ನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇದೊಂದು ರಾಜಕೀಯ ಪ್ರೇರಿತ ವರ್ಗಾವಣೆ, ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು,

ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ. ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.

ಒಂದು ಲೋಡ್ ಮರಳಿಗೆ 15 ಸಾವಿರ ರೂ. ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.

ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ,ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು