10:42 AM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ನಿವೃತ್ತ ಎಸ್‌ಪಿ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರಂಟ್ ಗೆ ಹೈಕೋರ್ಟ್ ತಡೆಯಾಜ್ಞೆ

08/07/2022, 19:21

ಮಂಗಳೂರು(reporterkarnataka.com): ನಿವೃತ್ತ ಎಸ್‌ಪಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ವಾರಂಟ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರೊಂದಿಗೆ ಜಯಂತ್ ಶೆಟ್ಟಿ ಅವರಿಗೆ ತಾತ್ಕಾಲಿಕ ರಿಲಾಕ್ಸ್ ದೊರೆತಿದೆ.

2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿ ಅಂದಿನ ಇನ್‌ಸ್ಪೆಕ್ಟರ್ ಜಯಂತ್ ಶೆಟ್ಟಿ ಮತ್ತು ಎಸ್‌ಐ ಶಿವಪ್ರಕಾಶ್ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಕಬೀರ್ ಉಳ್ಳಾಲ್ ಎಂಬುವರು ವಕೀಲರಾದ ಖಾಝಿ ಮುಖಾಂತರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ವಿಚಾರಾಧೀನ ನ್ಯಾಯಾಲಯ, ಜಯಂತ್ ಶೆಟ್ಟಿ ಹಾಗೂ ಶಿವಪ್ರಕಾಶ್‌ಗೆ ನೋಟಿಸ್ ಜಾರಿಗೊಳಿಸಿತ್ತು. ನ್ಯಾಯಾಲಯದ ಆದೇಶದ ವಿರುದ್ಧ ಈ ಇಬ್ಬರು ಪೊಲೀಸ್ ಅಧಿಕಾರಗಳು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಪೊಲೀಸ್ ಅಧಿಕಾರಿಗಳ ಅರ್ಜಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು. ಈ ಬಗ್ಗೆ ಕಬೀರ್ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ಪ್ರಕರಣವನ್ನು ವಿಚಾರಣೆ ನಡೆಸಿ, ಮರು ತನಿಖೆ ನಡೆಸುವಂತೆ ಆದೇಶಿಸಿ, ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು. ಆ ಪ್ರಕಾರ ಶಿವಪ್ರಕಾಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಜಯಂತ್ ಶೆಟ್ಟಿಗೆ ಯಾವುದೇ ನೋಟಿಸ್ ಸಿಕ್ಕಿರಲಿಲ್ಲ. ಈ ಮಧ್ಯೆ ವಿಚಾರಾಧೀನ ನ್ಯಾಯಾಲಯ ಜೂ.20ರಂದು ಜಯಂತ್ ಶೆಟ್ಟಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮಂಗಳೂರು ಪೊಲೀಸ್ ಆಯುಕ್ತರ ಮೂಲಕ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು. 

ಜಯಂತ್ ಶೆಟ್ಟಿ ತಮ್ಮ ವಕೀಲ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ನನಗೆ ಯಾವುದೇ ನೋಟಿಸ್ ಜಾರಿಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲು ಸೆಕ್ಷನ್ 197ಸಿಆರ್‌ಪಿಸಿ ಹಾಗು 170 ಪೊಲೀಸ್ ಕಾಯ್ದೆಯಡಿ ಅನುಮತಿ ಪಡೆದಿಲ್ಲ. ಆದ್ದರಿಂದ ಪ್ರಕರಣವನ್ನು ವಜಾಗೊಳಿಸಬೇಕು ಎಂದು ನ್ಯಾಯಾಲಯದಲ್ಲಿ  ವಿನಂತಿಸಿಕೊಂಡಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಇಡೀ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ ಎಂದು ಜಯಂತ್ ಶೆಟ್ಟಿ ಪರ ವಕೀಲರಾದ ಪದ್ಮರಾಜ್ ಆರ್. ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು