10:38 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಆದೇಶ ಪಾಲಿಸದ ಕೆಲವು ಎಂಜಿನಿಯರಿಂಗ್ ಕಾಲೇಜು: ಮಳೆಗೆ ನೀಡಿದ ರಜೆ ಕಡ್ಡಾಯ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

08/07/2022, 19:37

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಪ್ರಸಕ್ತವಾಗಿ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ  ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿವರು  ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ  ಪ್ರಾಂಶುಪಾಲರಿಗೆ ತಾಕೀತು ಮಾಡಿದರು.

ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆಯನ್ನು ಮೊದಲು ಸಮೀಕ್ಷೆ ಮಾಡಬೇಕು, ಅವರುಗಳು ಹಳ್ಳಿ, ಹಾಸ್ಟೇಲ್ ನಿಂದ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು, ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು, ಉಲ್ಲಂಘಿಸಿದ್ದಲ್ಲೀ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ  ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಭಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾ ನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

…..

*44ನೇ ಚೆಸ್ ಒಲಂಪಿಯಾಡ್ ಅಂಗವಾಗಿ 19ರಂದು ಜಿಲ್ಲಾ ಮಟ್ಟದ ಟಾರ್ಚ್ ರಿಲೇ: ಅಗತ್ಯ ಸಿದ್ದತೆಗಳಿಗೆ ಎಡಿಸಿ ಸೂಚನೆ*

ಮಂಗಳೂರು,ಜು.08(ಕ.ವಾ):- ದೇಶದಲ್ಲಿ ಚೆಸ್ ಕ್ರೀಡೆಗೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಇದೇ ಜುಲೈ 19 ರಿಂದ ನವದೆಹಲಿಯಲ್ಲಿ ಪ್ರಾರಂಭವಾಗುತ್ತಿರುವ 44ನೇ ಚೆಸ್ ಒಲಂಪಿಯಾಡ್ ಕ್ರೀಡಾಕೂಟದ ಹಿನ್ನಲೆಯಲ್ಲಿ ಅಂದೇ ಮಂಗಳೂರಿನಲ್ಲಿ ಸಂಘಟಿಸಲಾಗುತ್ತಿರುವ ಜಿಲ್ಲಾ ಮಟ್ಟದ ಟಾರ್ಚ್ ರಿಲೇ ಕಾರ್ಯಕ್ರಮದ ಯಶಸ್ವಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕೆ.ಎಚ್. ಕೃಷ್ಣಮೂತಿ ಅವರು ತಿಳಿಸಿದರು. 

 ಅವರು ಜು.8ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು