11:21 AM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಆದೇಶ ಪಾಲಿಸದ ಕೆಲವು ಎಂಜಿನಿಯರಿಂಗ್ ಕಾಲೇಜು: ಮಳೆಗೆ ನೀಡಿದ ರಜೆ ಕಡ್ಡಾಯ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

08/07/2022, 19:37

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಪ್ರಸಕ್ತವಾಗಿ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ  ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿವರು  ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ  ಪ್ರಾಂಶುಪಾಲರಿಗೆ ತಾಕೀತು ಮಾಡಿದರು.

ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆಯನ್ನು ಮೊದಲು ಸಮೀಕ್ಷೆ ಮಾಡಬೇಕು, ಅವರುಗಳು ಹಳ್ಳಿ, ಹಾಸ್ಟೇಲ್ ನಿಂದ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು, ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು, ಉಲ್ಲಂಘಿಸಿದ್ದಲ್ಲೀ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ  ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಭಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾ ನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

…..

*44ನೇ ಚೆಸ್ ಒಲಂಪಿಯಾಡ್ ಅಂಗವಾಗಿ 19ರಂದು ಜಿಲ್ಲಾ ಮಟ್ಟದ ಟಾರ್ಚ್ ರಿಲೇ: ಅಗತ್ಯ ಸಿದ್ದತೆಗಳಿಗೆ ಎಡಿಸಿ ಸೂಚನೆ*

ಮಂಗಳೂರು,ಜು.08(ಕ.ವಾ):- ದೇಶದಲ್ಲಿ ಚೆಸ್ ಕ್ರೀಡೆಗೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಇದೇ ಜುಲೈ 19 ರಿಂದ ನವದೆಹಲಿಯಲ್ಲಿ ಪ್ರಾರಂಭವಾಗುತ್ತಿರುವ 44ನೇ ಚೆಸ್ ಒಲಂಪಿಯಾಡ್ ಕ್ರೀಡಾಕೂಟದ ಹಿನ್ನಲೆಯಲ್ಲಿ ಅಂದೇ ಮಂಗಳೂರಿನಲ್ಲಿ ಸಂಘಟಿಸಲಾಗುತ್ತಿರುವ ಜಿಲ್ಲಾ ಮಟ್ಟದ ಟಾರ್ಚ್ ರಿಲೇ ಕಾರ್ಯಕ್ರಮದ ಯಶಸ್ವಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕೆ.ಎಚ್. ಕೃಷ್ಣಮೂತಿ ಅವರು ತಿಳಿಸಿದರು. 

 ಅವರು ಜು.8ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು